ADVERTISEMENT

ಸೇಡಂ: ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 18:29 IST
Last Updated 10 ಜುಲೈ 2025, 18:29 IST
ನಾರಾಯಣ ರಾಥೋಡ
ನಾರಾಯಣ ರಾಥೋಡ   

ಸೇಡಂ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಮುಧೋಳ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ನಾರಾಯಣ ರಾಥೋಡ (12) ಗುರುವಾರ ಕೊಠಡಿಯಲ್ಲಿರುವ ಸೀಲಿಂಗ್‌ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿದ್ಯಾರ್ಥಿಯು, ಕಲಬುರಗಿ ಸಮೀಪದ ಪಾಣೆಗಾಂವ ತಾಂಡಾದ ನಿವಾಸಿ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಶಾಲೆಗೆ ಪ್ರವೇಶ ಪಡೆದಿದ್ದ.

ಬಾಲಕ, ಶಾಲೆಯಲ್ಲಿ ಬೆಳಿಗ್ಗೆ ಎಂದಿನಂತೆ ಉಪಾಹಾರ ಸೇವಿಸಿದ್ದಾನೆ. ನಂತರ ಜರುಗಿದ ಪ್ರಾರ್ಥನೆಯಲ್ಲಿ ಪಾಲ್ಗೊಂಡಿಲ್ಲ. ಆಗ ಶಿಕ್ಷಕರು ಕೊಠಡಿಗೆ ತೆರಳಿ ಪರಿಶೀಲಿಸಿದಾಗ, ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.