ADVERTISEMENT

ಶಾಲೆ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 18:57 IST
Last Updated 10 ಏಪ್ರಿಲ್ 2021, 18:57 IST
ಶೇಖ್ ಉಮರ್
ಶೇಖ್ ಉಮರ್   

ಕಲಬುರ್ಗಿ: ಇಲ್ಲಿನ ಎಂಎಸ್‌ಕೆ ಮಿಲ್‌ ಪ್ರದೇಶದ ಮದೀನಾ ಕಾಲೊನಿಯ ಆಯಿಶಾ ಶಾಲೆಯ ಕೊಠಡಿಯಲ್ಲಿಯೇ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.‌

ಶಹಾ ಜಿಲಾನಿ ಕಾಲೊನಿಯ ಶೇಖ್ ಮಹಿಬೂಬ್ ಅವರ ಪುತ್ರ ಶೇಖ್ ಉಮರ್ (16) ಸಾವಿಗೆ ಶರಣಾದವ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಆದರೆ, ಸರಿಯಾಗಿ ಓದು ಎಂದು ಶುಕ್ರವಾರ ರಾತ್ರಿ ಪಾಲಕರು ಬೈದಿದ್ದರು. ಅದರಿಂದ ಮನನೊಂದು ಹೀಗೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಾವಿಗೆ ಮುನ್ನ ವಿದ್ಯಾರ್ಥಿ ಕೊಠಡಿಯ ಬ್ಲ್ಯಾಕ್‌ಬೋರ್ಡ್‌ ಮೇಲೆ, ‘ಇಂದು ನನ್ನ ಕೊನೆಯ ದಿನವಾಗಿದೆ. ಇಂದು ನಾನು ಸಾಯುತ್ತೇನೆ. ನನ್ನ ಮೇಲೆತಂದೆ– ತಾಯಿ ಆಶೀರ್ವಾದ ಇರಲಿ’ ಎಂದು ಬರೆದಿದ್ದಾನೆ. ವಿದ್ಯಾರ್ಥಿ ಶನಿವಾರ ಬೆಳಿಗ್ಗೆ 7.30ರ ಸುಮಾರಿಗೆ ಶಾಲೆ ಹಿಂಬಾಗಿಲಿನಿಂದ ಕೊಠಡಿ ಪ್ರವೇಶಿಸಿದ್ದಾನೆ. ಬೆಳಿಗ್ಗೆ 9.30ಕ್ಕೆ ಸಿಬ್ಬಂದಿ ಬಾಗಿಲು ತೆರೆದಾಗಲೇ ವಿಷಯ ಗೊತ್ತಾಗಿದೆ. ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.