ADVERTISEMENT

ಟಿಕಾಯತ್ ಮುಖಕ್ಕೆ ಮಸಿ: ಎಸ್‌ಯುಸಿಐ ಖಂಡನೆ

​ಪ್ರಜಾವಾಣಿ ವಾರ್ತೆ
Published 30 ಮೇ 2022, 16:02 IST
Last Updated 30 ಮೇ 2022, 16:02 IST
ಎಚ್.ವಿ. ದಿವಾಕರ
ಎಚ್.ವಿ. ದಿವಾಕರ   

ಕಲಬುರಗಿ: ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರೈತರ ಸಭೆಯ ಸಂದರ್ಭದಲ್ಲಿ ರೈತ ನಾಯಕ ರಾಕೇಶ ಟಿಕಾಯತ್ ಅವರ ಮುಖಕ್ಕೆ ಮಸಿ ಬಳಿದ ಘಟನೆಯನ್ನು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ‍‍ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ದಿ.ದಿವಾಕರ ಖಂಡಿಸಿದ್ದಾರೆ.

ಈ ಕುರಿತು ‍ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕೆಲವು ಗೂಂಡಾಗಳು ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಹಾಗೂ ಅವರ ಸಂಗಡಿಗರ ಮೇಲೆ ನಡೆಸಿದ ಕ್ರೂರ ದಾಳಿ ಮಾಡಿದವರು ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ದಾಳಿ ನಡೆಯುವ ಸಮಯದಲ್ಲಿ ಅವರು ಮೋದಿ, ಮೋದಿ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಆದ್ದರಿಂದ ದಾಳಿ ನಡೆಸಿದ ಗೂಂಡಾಗಳ ಕೃತ್ಯದ ಬಗ್ಗೆ ಸರ್ಕಾರವು ನಿಷ್ಪಕ್ಷಪಾತ ತನಿಖೆ ನಡೆಸಿ, ದಾಳಿಯ ಹಿಂದಿನ ಉದ್ದೇಶವನ್ನು ಪತ್ತೆ ಮಾಡಿ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT