ಕಮಲಾಪುರ: ಬೆಂಕಿ ಹಚ್ಚಿ ಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಜೀವಣಗಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ವೆಂಕಟರಾವ ಧರ್ವೆ (45) ಆತ್ಮಹತ್ಯೆ ಮಾಡಿಕೊಂಡವರು.
ಜೀವಣಗಿಯಲ್ಲಿನ ಮನೆಯಲ್ಲಿ ವೆಂಕಟ್ ಒಬ್ಬರೆ ವಾಸಿಸುತ್ತಿದ್ದರು. ರಾತ್ರಿ 8ಕ್ಕೆ ಪುತ್ರ ಮನೀಷ ಅವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿ ಫೋನ್ ಕಟ್ ಮಾಡಿದ್ದರು. ಮುಂಬೈನಲ್ಲಿದ್ದ ಮನೀಷ ಜೀವಣಗಿಯಲ್ಲಿನ ತಮ್ಮ ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಅವರು ತೆರಳಿ ನೋಡುವಷ್ಟರಲ್ಲಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿದ್ದರಿಂದ ರಕ್ಷಿಸಲು ಆಗಿಲ್ಲ. ಬಾಗಿಲು ಮುರಿದು ನೋಡುವಷ್ಟರಲ್ಲಿ ವೆಂಕಟ್ ಸುಟ್ಟು ಕರಕಲಾಗಿದ್ದರು.
ವರ್ಷದ ಹಿಂದೆ ವೆಂಕಟ್ ತಾಯಿ ತೀರಿಕೊಂಡಿದ್ದರು. ಕಳೆದ 6 ತಿಂಗಳ ಹಿಂದೆ ಮುಂಬೈನಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೂರು ತಿಂಗಳ ಹಿಂದೆ ತಂದೆ ತೀರಿಕೊಂಡಿದ್ದರು. ಇದರಿಂದ ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ವೆಂಕಟ್ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತರಿಗೆ ಮೂವರು ಪುತ್ರರು, ಒಬ್ಬ ಪುತ್ರಿ ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.