ADVERTISEMENT

ನೇಣು ಹಾಕಿಕೊಂಡು ಶಿಕ್ಷಕಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 11:25 IST
Last Updated 12 ಏಪ್ರಿಲ್ 2021, 11:25 IST

ಹರಿಯಬ್ಬೆ (ಧರ್ಮಪುರ): ಗ್ರಾಮದ ಶಿಕ್ಷಕಿಯೊಬ್ಬರು ಮನೆಯ ಪಕ್ಕದ ಮಾವಿನ ಗಿಡಕ್ಕೆ ನೇಣು ಹಾಕಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜರಾಜೇಶ್ವರಿ (55) ಮೃತಪಟ್ಟವರು. ಹೊಸಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆರೇಳು ವರ್ಷಗಳಿಂದ ಮಾನಸಿಕ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಅಬ್ಬಿನಹೊಳೆ ಎಸ್ಐ ಪರಶುರಾಂ ಎಸ್. ಲಮಾಣಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.