ADVERTISEMENT

ರಾಷ್ಟ್ರನಿರ್ಮಾಣ: ಶಿಕ್ಷಕರ ಪಾತ್ರ ಅಪಾರ- ಸಿದ್ಧಲಿಂಗ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 8:02 IST
Last Updated 6 ಸೆಪ್ಟೆಂಬರ್ 2021, 8:02 IST
ಜೇವರ್ಗಿ ಪಟ್ಟಣದ ಕನ್ನಡ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೇವೆಯಿಂದ ನಿವೃತ್ತರಾದ ಶಿಕ್ಷಕರಿಗೆ ಸನ್ಮಾನಿಸಲಾಯಿತು
ಜೇವರ್ಗಿ ಪಟ್ಟಣದ ಕನ್ನಡ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೇವೆಯಿಂದ ನಿವೃತ್ತರಾದ ಶಿಕ್ಷಕರಿಗೆ ಸನ್ಮಾನಿಸಲಾಯಿತು   

ಜೇವರ್ಗಿ: ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಸಹಸ್ರಾರು ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಿಗೆ ಇದೆ. ಸಮಾಜದಲ್ಲಿನ ಪ್ರತಿಯೊಬ್ಬರು ಶಿಕ್ಷಕರ ವೃತ್ತಿಗೆ ತಲೆ ಬಾಗಲೇಬೇಕು ಎಂದು ಯಡ್ರಾಮಿ ವಿರಕ್ತಮಠದ ಪೀಠಾಧಿಪತಿ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದ ಕನ್ನಡ ಭವನದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ADVERTISEMENT

ಸೊನ್ನ ವಿರಕ್ತಮಠದ ಶಿವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ತಹಶೀಲ್ದಾರ್ ವಿನಯಕುಮಾರ ಪಾಟೀಲ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಕಸ್ತೂರಿಬಾಯಿ ಸಾಹೇಬಗೌಡ ಕಲ್ಲಾ ಅಧ್ಯಕ್ಷತೆ ವಹಿಸಿದ್ದರು.

ಯಡ್ರಾಮಿ ತಹಶೀಲ್ದಾರ್ ಶಾಂತಗೌಡ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ, ತಾ.ಪಂ ಇಒ ವಿಲಾಸರಾಜ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಬಿ. ಪಾಟೀಲ, ಮರೆಪ್ಪ ಮೂಲಿಮನಿ, ರುದ್ರಪ್ಪ ಚಟ್ನಳ್ಳಿ, ಬಸವರಾಜ ತೇಲಕರ್, ಶಿವರಾಜ ಸ್ವಾಮಿ, ಶ್ರೀಮಂತ ಕುಂಬಾರ ಇದ್ದರು.

ದಲಿತ ಸಮನ್ವಯ ಸಮಿತಿ ಆಕ್ರೋಶ

ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಕೈ ಬಿಟ್ಟಿದ್ದರಿಂದ ದಲಿತ ಸಮನ್ವಯ ಸಮಿತಿ ಮುಖಂಡರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಉದ್ದೇಶಪೂರ್ವಕವಾಗಿ ಖರ್ಗೆ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಮುಖಂಡರು ಆರೋ‍ಪಿಸಿದರು. ನಂತರ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ, ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೈ ಬೀಡುವ ಯಾವುದೇ ಉದ್ದೇಶವಿರಲಿಲ್ಲ. ಕಣ್ತಪ್ಪಿನಿಂದ ಈ ಅಚಾತುರ್ಯವಾಗಿದೆ. ಮುಂದೆ ಈ ರೀತಿ ಘಟನೆ ನಡೆಯದಂತೆ ಎಚ್ಚರ ವಹಿಸಲಾಗುವುದು ಎಂದು ಸ್ಪಷ್ಟನೆ ನೀಡಿ, ಕ್ಷಮೆ ಕೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.