ಕಲಬುರ್ಗಿ: ಕರ್ನಾಟಕ ರಾಜ್ಯ ಸರಕಾರಿ ಚಿತ್ರಕಲಾ ಶಿಕ್ಷಕರ ಸಂಘದ ಜಿಲ್ಲಾ ಶಾಖೆ ವತಿಯಿಂದ ಸನ್ಮಾನ ಸಮಾರಂಭವನ್ನು ನಗರದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.
ಕಲಬುರ್ಗಿ ದಕ್ಷಿಣ ವಲಯ ಕಾರ್ಯಾಲಯದ ನಿವೃತ್ತ ಶಿಕ್ಷಣ ಸಂಯೋಜಕ ಚಂದ್ರಕಾಂತ ಪಿ.ಬಿರಾದಾರ, ಕಮಲಾಪುರ ಸರ್ಕಾರಿ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಡಾ.ಶಂಕರ ರಾಠೋಡ, ಶಿಕ್ಷಕರ ಸಂಘದ ರಾಯಚೂರ ಜಿಲ್ಲಾ ಶಾಖೆ ಅಧ್ಯಕ್ಷ ನಾಗೇಶ ಗೌಡ ಮಾತನಾಡಿದರು.
ಅಫಜಲಪೂರ ತಾಲ್ಲೂಕಿನ ಗಾಣಗಾಪುರ ಸರ್ಕಾರಿ ಪ್ರೌಢಶಾಲೆ ನಿವೃತ್ತ ಚಿತ್ರಕಲಾ ಶಿಕ್ಷಕ ತಾರಾಸಿಂಗ್ ರಾಠೋಡ, ಕರ್ನಾಟಕ ಲಲಿತಕಲಾ ಅಕಾಡೆಮಿ ನೂತನ ಸಹ ಸದಸ್ಯ ಹಣಮಂತ ಮಂತಟ್ಟ, ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಸದಸ್ಯರು, ಉದ್ಯಮಿ ಉಮೇಶ ಸಿದ್ರಾಮಪ್ಪ ಬೀರಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಚಂದ್ರಕಾಂತ ಎನ್.ನಾಯ್ಕೋಡಿ ಅಧ್ಯಕ್ಷತೆ ವಹಿಸಿದ್ದರು. ನಾರಾಯಣ ಎಂ.ಜೋಶಿ, ಪ್ರಕಾಶ ಗಡಕರ ಅವರನ್ನು ಸನ್ಮಾನಿಸಲಾಯಿತು.
ಮಾನಪ್ಪ ನಾಯಕ ಪ್ರಾರ್ಥನೆ ಗೀತೆ ಹಾಡಿದರು. ಸಂಗಪ್ಪಾ ಸೇದಿಮನಿ ನಿರೂಪಿಸಿದರು. ಮಹಾಂತಪ್ಪಾ ಗೋಪುರೆಡ್ಡಿ ವಂದಿಸಿದರು. ಸಂಘದ ಜಿಲ್ಲಾ ಶಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಬೆಳ್ಳಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.