ಕಲಬುರ್ಗಿ: ಜಿಲ್ಲೆಯ ಯಡ್ರಾಮಿಯತಹಶೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ ಅವರಿಗೂ ಕೋವಿಡ್ ಸೋಂಕು ತಗುಲಿದೆ. ಶನಿವಾರವೇ ಅವರನ್ನು ಇಲ್ಲಿನ ಜಿಮ್ಸ್ನ ಐಸೋಲೇಷನ್ ವಾರ್ಡ್ಗೆ ದಾಖಲಿಸಲಾಗಿದೆ.
ಹೀಗಾಗಿ, ಅವರೊಂದಿಗೆ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ನಿರ್ವಹಿಸಿದ್ದ ಸಿಬ್ಬಂದಿ, ಅವರ ನೇರ ಸಂಪರ್ಕಕ್ಕೆ ಬಂದ ಸಹವರ್ತಿಗಳು ಹೋಂ ಕ್ವಾರಂಟೈನ್ ಆಗಬೇಕಾಗಿದೆ.
ನಾಯ್ಕೋಡಿ ಕೋವಿಡ್ ಕೇರ್ ಸೆಂಟರ್ಗಳಿಗೆ ಭೇಟಿ ನೀಡಿದ್ದರು. ಅಲ್ಲದೇ ಕೊರೊನಾ ನಿಯಂತ್ರಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.