ADVERTISEMENT

ಆಟೊದಿಂದ ಬಿದ್ದು ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 14:56 IST
Last Updated 14 ಜುಲೈ 2020, 14:56 IST

ಚಿಂಚೋಳಿ: ಆಟವಾಡಲು ಶಾಲೆಯ ಮೈದಾನಕ್ಕೆ ಹೋಗಿದ್ದ ಬಾಲಕ ಮರಳಿ ಬರುವಾಗ ಚಲಿಸುತ್ತಿದ್ದ ಅಟೊದಿಂದ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ ಅವಘಡ ತಾಲ್ಲೂಕಿನ ಗರಕಪಳ್ಳಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ರಾಮಚಂದ್ರ ಗೋಪಾಲ ಕಂಬಾರ (11) ಮೃತಪಟ್ಟ ಬಾಲಕ. ಸ್ಥಳಕ್ಕೆ ಸಬ್ ಇನಸ್ಪೆಕ್ಟರ್ ತಿಮ್ಮಯ್ಯ ಭೇಟಿ ನೀಡಿದ್ದಾರೆ. ಪಾಲಕರು ನೀಡಿದ ದೂರಿನ ಮೇರೆಗೆ ಸುಲೇಪೇಟ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT