ADVERTISEMENT

ಕಲಬುರ್ಗಿಯಲ್ಲಿ ಬಂದ್ ವಿಫಲ: ಪ್ರತಿಭಟನೆಗೂ ಸುಳಿಯದ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 4:13 IST
Last Updated 5 ಡಿಸೆಂಬರ್ 2020, 4:13 IST
ಕಲಬುರ್ಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶನಿವಾರ ಬೆಳಿಗ್ಗೆ ಜನಸಂಚಾರ ಎಂದಿನಂತೆ ಕಂಡು ಬಂತು
ಕಲಬುರ್ಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶನಿವಾರ ಬೆಳಿಗ್ಗೆ ಜನಸಂಚಾರ ಎಂದಿನಂತೆ ಕಂಡು ಬಂತು   

ಕಲಬುರ್ಗಿ: ಮರಾಠಾ ಅಭಿವೃದ್ಧಿ ನಿಗಮ ಕೈಬಿಡುವಂತೆ ಆಗ್ರಹಿಸಿ ಶನಿವಾರ ಕರೆ ನೀಡಿದ ರಾಜ್ಯ ಬಂದ್ ಕಲಬುರ್ಗಿಯಲ್ಲಿ ಯಾವುದೇ ರೀತಿಯ ಪರಿಣಾಮ ಬೀರಲಿಲ್ಲ.

ವಾಹನ ಸಂಚಾರ, ವ್ಯಾಪಾರ ವಹಿವಾಟು, ಹೋಟೆಲ್, ಪೆಟ್ರೋಲ್ ಬಂಕ್ ಸೇರಿದಂತೆ ಎಲ್ಲ ಚಟುವಟಿಕೆಗಳೂ ನಿರಾಳವಾಗಿ ಆರಂಭವಾದವು. ತರಕಾರಿ, ಹಣ್ಣು ಹಾಗೂ ದಿನಸಿ ವ್ಯಾಪಾರಕ್ಕೆ ಹೆಸರಾದ ಇಲ್ಲಿನ ಸೂಪರ್ ಮಾರುಕಟ್ಟೆಯಲ್ಲಿ ಕೂಡ ಜನಜಂಗುಳಿ ಎಂದಿನಂತಿದೆ.

ಸರ್ಕಾರಿ ಹಾಗೂ ಖಾಸಗಿ ಬಸ್ ಸಂಚಾರ, ಆಟೊ, ಕಾರ್, ಬೈಕುಗಳ ಓಡಾಟ ಎಂದಿನಂತಿದೆ.

ADVERTISEMENT

ಕನ್ನಡ ಸಂಘಟನೆ-ಕರ್ನಾಟಕ ನೇತೃತ್ವದಲ್ಲಿ ಹೋರಾಟಕ್ಕೆ 14ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಬೆಂಬಲ ಘೋಷಿಸಿವೆ. ಆದರೆ ಬೆಳಿಗ್ಗೆ 9.30ರವರೆಗೂ ಯಾವುದೇ ಸಂಘಟನೆಯ ಒಬ್ಬ ಕಾರ್ಯಕರ್ತ ಕೂಡ ಕಂಡುಬರಲಿಲ್ಲ. ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತಿಯಲ್ಲಿ ಬೆಳಿಗ್ಗೆ 11ರ ಸುಮಾರಿಗೆ ಮುಖ್ಯಮಂತ್ರಿಗಳ ಪ್ರತಿಕೃತಿ ದಮನ ಮಾಡುವುದಾಗಿ ಹೋರಾಟದ ನೇತೃತ್ವ ವಹಿಸಿದ ಮುಖಂಡರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.