ADVERTISEMENT

ಕಲಬುರಗಿ | ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಆರೋಪಿಗಾಗಿ ಮಸೀದಿಗಳಲ್ಲಿ ಶೋಧ!

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2024, 0:11 IST
Last Updated 12 ಮಾರ್ಚ್ 2024, 0:11 IST
ಎನ್‌ಐಎ
ಎನ್‌ಐಎ   

ಕಲಬುರಗಿ: ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಶಂಕಿತ ಆರೋಪಿಗಳಿಗಾಗಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ತಂಡ ಕಲಬುರಗಿ ನಗರದಲ್ಲಿ ಶೋಧ ಕಾರ್ಯ ಮುಂದುವರಿಸಿದೆ.

ಮೂರು ದಿನಗಳಿಂದ ನಗರದಲ್ಲಿ ಬೀಡುಬಿಟ್ಟಿರುವ ಎನ್‌ಐಎ ಅಧಿಕಾರಿಗಳು ಹಲವು ಆಯಾಮಗಳಿಂದ ಶಂಕಿತರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಎನ್‌ಐಎ ಅಧಿಕಾರಿಗಳು ಸೋಮವಾರ ನಗರದಲ್ಲಿನ ಹಲವು ಮಸೀದಿಗಳಿಗೆ ತೆರಳಿ, ಶೋಧ ಕಾರ್ಯ ನಡೆಸಿದರು. ಮಸೀದಿಗಳ ಸಿ.ಸಿ ಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಂಕಿತ ಆರೋಪಿ ಕಲಬುರಗಿಯಲ್ಲಿ ಉಳಿದುಕೊಂಡಿದ್ದಾನೆ ಅಥವಾ ಮುಂದೆ ಎಲ್ಲಿಗಾದರೂ ಹೋದನೆ ಎಂಬ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಎನ್‌ಐಎ ತಂಡ ಪತ್ತೆ ಕಾರ್ಯನಡೆಸಿದೆ ಎಂದು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.