ADVERTISEMENT

ಇನ್ನೂರು ಸಸಿನೆಡಲು ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 8:13 IST
Last Updated 10 ಜುಲೈ 2020, 8:13 IST
ಕಲಬುರ್ಗಿಯ ನಗರೇಶ್ವರ ಶಾಲೆಯಲ್ಲಿ ಗುರುವಾರ ಪ್ರೊ.ಎಚ್.ಎಂ.ಮಹೇಶ್ವರಯ್ಯ ಸಸಿ ನೆಟ್ಟರು
ಕಲಬುರ್ಗಿಯ ನಗರೇಶ್ವರ ಶಾಲೆಯಲ್ಲಿ ಗುರುವಾರ ಪ್ರೊ.ಎಚ್.ಎಂ.ಮಹೇಶ್ವರಯ್ಯ ಸಸಿ ನೆಟ್ಟರು   

ಕಲಬುರ್ಗಿ: ಇಲ್ಲಿನ ನಗರೇಶ್ವರ ವೆಲ್‍ಫೇರ್ ಸೊಸೈಟಿ ಹಾಗೂ ಜಿಲ್ಲಾ ಸೇವಾ ಸಮಿತಿ ಆಶ್ರಯದಲ್ಲಿ ಗುರುವಾರ ನಗರೇಶ್ವರ ಶಾಲೆಯ ಆವರಣದಲ್ಲಿ 200 ಸಸಿಗಳನ್ನು ನಡೆಸುವ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಚ್‌.ಎಂ. ಮಹೇಶ್ವರಯ್ಯ ಹಾಗೂಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು‌ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಗರೇಶ್ವರ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಮೈಲಾಪೂರ, ಗೌರವ ಕಾರ್ಯದರ್ಶಿ ರವೀಂದ್ರ ಮುಕ್ಕಾ, ಡಾ.ರಾಜಶ್ರೀ ಪಾಲಾದಿ, ರೋಟರಿ ಕ್ಲಬ್‌ ಅಧ್ಯಕ್ಷ ಪ್ರದೀಪ ಮೂರಡಕರ್, ಆರಾಧನಾ ಸಂಸ್ಥೆಯ ಕಾರ್ಯದರ್ಶಿ ಚೇತನ್‍ಕುಮಾರ ಗಾಂಗಜೀ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸಸಿ ನೆಟ್ಟರು.

ADVERTISEMENT

ಶಾಲೆಯ ಮೂರು ವಿಭಾಗದ ಎಲ್ಲ ಸಿಬ್ಬಂದಿ ಕೂಡ ಇದರಲ್ಲಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.