ಜೇವರ್ಗಿ (ಕಲಬುರ್ಗಿ ಜಿಲ್ಲೆ): ಅಕ್ರಮವಾಗಿ ಪಿಸ್ತೂಲ್ ಇಟ್ಟುಕೊಂಡು ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿಯ ಪೊಲೀಸರು ಬಂಧಿಸಿದ್ದಾರೆ.
ತಾಲ್ಲೂಕಿನ ಆಂದೋಲಾ ಗ್ರಾಮದ ನಿವಾಸಿ ಲಾಲ್ ಅಹಮದ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ನಿವಾಸಿ ಚಂದ್ರಶೇಖರ ಬಂಧಿತರು. ಇವರಿಂದ ₹10 ಸಾವಿರ ಮೌಲ್ಯದ 1,236 ಗ್ರಾಂ ಗಾಂಜಾ, ಪಿಸ್ತೂಲ್, ₹ 2 ಲಕ್ಷ ಮೌಲ್ಯದ ಕಾರು, ₹2.94 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.