ADVERTISEMENT

ಬೈಕ್– ಟಂಟಂ ಡಿಕ್ಕಿ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 8:11 IST
Last Updated 4 ಡಿಸೆಂಬರ್ 2020, 8:11 IST

ಚಿತ್ತಾಪುರ: ರಾವೂರು ರಸ್ತೆಯಲ್ಲಿ ಗುರುವಾರ ರಾತ್ರಿ ಟಂಟಂ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಬೈಕ್‌ನಲ್ಲಿ ಸವಾರಿ ಮಾಡುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಲ್ಲೂರ್ ಬಿ. ಗ್ರಾಮದ ಮಹಾದೇವ ಅಣಿವೀರಪ್ಪ (45) ಮತ್ತು ಲಕ್ಷ್ಮಿಪುರ ಗ್ರಾಮದ ಮನೋಹರ ಉಮ್ಲಾ ರಾಠೋಡ (35) ಮೃತರು. ಚಿತ್ತಾಪುರದಿಂದ ವಾಡಿ ಮಾರ್ಗವಾಗಿ ಹೋಗುತ್ತಿದ್ದ ಟಂಟಂ ಹಾಗೂ ರಾವೂರ ಮಾರ್ಗದಿಂದ ಎದುರಿಗೆ ಹೊರಟಿದ್ದ ಬೈಕ್‌ಗಳ ಮಧ್ಯೆ ಡಿಕ್ಕಿ ಸಂಭವಿಸಿದೆ. ಪಟ್ಟಣದಿಂದ 2 ಕಿ.ಮೀ. ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಸಹಾಯಕ್ಕೆ ಮುಂದಾದರು. ಆದರೆ, ತೀವ್ರ ರಕ್ತದ ಮಡುವಿನಲ್ಲಿ ಬಿದ್ದ ಬೈಕ್‌ ಸವಾರರಿಬ್ಬರೂ ಕೆಲವೇ ನಿಮಿಷಗಳಲ್ಲಿ ಕೊನೆಯುಸಿರೆಳೆದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಚಿತ್ತಾಪುರ ಸಿಪಿಐ ಕೃಷ್ಣಪ್ಪ ಕಲ್ಲದೇವರ ಮತ್ತು ಪಿಎಸ್ಐ ಶ್ರೀಶೈಲ ಅಂಬಾಟಿ ಸ್ಥಳಕ್ಕೆ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.