ADVERTISEMENT

ಚಿತ್ತಾಪುರ: ಭಾರಿ ಮಳೆ, ಸಿಡಿಲು ಬಡಿದು ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 16:37 IST
Last Updated 6 ಅಕ್ಟೋಬರ್ 2021, 16:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿತ್ತಾಪುರ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ದಿಗ್ಗಾಂವ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿ ಇಬ್ಬರು ಮೃತಪಟ್ಟಿದ್ದಾರೆ.

ಬಸವರಾಜ ಶರಣಪ್ಪ ಶಹಾಬಾದಿ (56) ಹಾಗೂ ಅರ್ಜುನ ಸಾಬಣ್ಣ ಕೊಳ್ಳೂರ (52) ಎಂಬುವವರು ಸಿಡಿಲು ಅಪ್ಪಳಿಸಿ ಸಾವನ್ನಪ್ಪಿದ್ದಾರೆ.

ಬಸವರಾಜ ಅವರ ಮೃಹದೇಹ ಮಂಗಳವಾರ ರಾತ್ರಿ ಪತ್ತೆಯಾಗಿದೆ. ಅರ್ಜುನ ಮೃತದೇಹ ಬುಧವಾರ ಪತ್ತೆಯಾಗಿದೆ. ಶವ ಪರೀಕ್ಷೆ ನಡೆಸಿ ಮೃತದೇಹ ಕುಟುಂಬದವರಿಗೆ ನೀಡಲಾಗಿದೆ.

ಕೂಲಿ ಕೆಲಸಕ್ಕೆಂದು ಹೋಗಿದ್ದಾಗ ಅಡವಿಯಲ್ಲಿ ಮಳೆ ಬರುವಾಗ ಈ ಘಟನೆ ಜರುಗಿದೆ. ಬುಧವಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವು ಕಚ್ಚಿ ಸಾವು
ಚಿತ್ತಾಪುರ:
ತಾಲ್ಲೂಕಿನ ಭಂಕಲಗಾ ಗ್ರಾಮದಲ್ಲಿ ಮಂಗಳವಾರ ಶರಣಪ್ಪ ಮಲ್ಲಪ್ಪ (55) ಎಂಬುವರಿಗೆ ಹಾವು ಕಚ್ಚಿ ಮೃತಪಟ್ಟಿದ್ದಾರೆ ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT