ADVERTISEMENT

ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವು

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 12:53 IST
Last Updated 4 ಮಾರ್ಚ್ 2020, 12:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೇವರ್ಗಿ: ತಾಲ್ಲೂಕಿನ ಹಾಲಗಡ್ಲಾ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.

ಮೃತರನ್ನು ತಾಲ್ಲೂಕಿನ ಹರನೂರ ಗ್ರಾಮದ ನಿವಾಸಿಗಳಾದ ನಾಗಪ್ಪ ಸಕ್ರೆಪ್ಪ ಗಿರಣಿ (18), ಬಸಪ್ಪ ದೊಡ್ಡಸಕ್ರೆಪ್ಪ ಗಿರಣಿ (25) ಎಂದು ಗುರುತಿಸಲಾಗಿದೆ.

ಜೇವರ್ಗಿ ಠಾಣೆಯ ಎ.ಎಸ್.ಐ ಗುರುಲಿಂಗಯ್ಯ ಸ್ವಾಮಿ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕುಟುಂಬದ ಸದಸ್ಯರು ನೀಡಿದ ದೂರಿನ್ವಯ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.