ADVERTISEMENT

ವೈಜನಾಥ ಪಾಟೀಲ ಪಾರ್ಥಿವ ಶರೀರದ ಮೆರವಣಿಗೆ ಆರಂಭ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2019, 7:16 IST
Last Updated 3 ನವೆಂಬರ್ 2019, 7:16 IST
   

ಕಲಬುರ್ಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿರುವ ಮನೆಯಲ್ಲಿ ಧಾರ್ಮಿಕ ವಿಧಿ ವಿಧಾನ ಪೂರೈಸಿದ ಬಳಿಕ ಮಾಜಿ ಸಚಿವ ವೈಜನಾಥ ಪಾಟೀಲರ ಪಾರ್ಥಿವ ಶರೀರವನ್ನು ಮೆರವಣಿಗೆಯಲ್ಲಿಅಂತ್ಯಕ್ರಿಯೆ ಸ್ಥಳಕ್ಕೆ ಕರೆ ತರಲಾಗುತ್ತಿದೆ

ಸಂಸದ ಡಾ.ಉಮೇಶ ಜಾಧವ, ಚಿಂಚೋಳಿ ಶಾಸಕ ಡಾ. ಅವಿನಾಶ ಜಾಧವ, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಶಹಾಪುರ ಶಾಸಕ ಶರಣಬಸಪ್ಪ ದರ್ಸನಾಪುರ, ಮುಖಂಡ ಸೋಮಶೇಖರ ಗೋನಾಯಕ ಭಾಗಿಯಾಗಿದ್ದಾರೆ.

ವೈಜನಾಥ ಪಾಟೀಲ ಗೌರವಾರ್ಥ ಬಜಾರ ಬಂದ್
ಚಿಂಚೋಳಿ (ಕಲಬುರ್ಗಿ ಜಿಲ್ಲೆ): ಮಾಜಿ ಸಚಿವ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷರಾಗಿದ್ದ ವೈಜನಾಥ ಪಾಟೀಲರ ನಿಧನರಾದ್ದರಿಂದ ಅವರ ಗೌರವಾರ್ಥ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಮೃತರಿಗೆ ಗೌರವ ಸಲ್ಲಿಸಿದರು.

ಜಿಂದಾಬಾದ್ ಜಿಂದಾಬಾದ್ ವೈಜನಾಥ ಪಾಟೀಲ‌ ಜಿಂದಾಬಾದ್.ಹುಟ್ಟಿಬಾ ಹುಟ್ಟಿ ಬಾ ವೈಜನಾಥ ಪಾಟೀಲ ಮತ್ತೆ ಹುಟ್ಟಿಬಾ. ವೈಜನಾಥ ಪಾಟೀಲ ಅಮರ ರಹೆ ಘೋಷಣೆಗಳನ್ನು ಕೂಗುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.