ಬೆಂಗಳೂರು:ಉಪ ಚುನಾವಣೆಯಲ್ಲಿ ಜನ ಖಂಡಿತ ನಮಗೆ ಬೆಂಬಲ ಕೊಡುತ್ತಾರೆ. ಚಿಂಚೋಳಿ ಕ್ಷೇತ್ರದ ಉಪ ಚುನಾವಣೆಯಲ್ಲಿ ನಮ್ಮ ಪಕ್ಷವೇ ಗೆಲ್ಲಲಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಚಿಂಚೋಳಿ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕುರಿತುಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು,ಉಮೇಶ ಜಾಧವ ಯಾಕೆ ಪಕ್ಷ ಬಿಟ್ಟು ಹೋದರು ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಾಮಾಣಿಕ ಆಡಳಿತ ಕೊಡುತ್ತೀವಿ ಅನ್ನೋ ಮೋದಿ ಇದರ ಬಗ್ಗೆ ಏನಂತಾರೆ ಎಂದು ಪ್ರಶ್ನಿಸಿದರು.
ರಮೇಶ ಜಾರಕಿಹೊಳಿ ಅಸಮಾಧಾನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಾಯಕರ ಜೊತೆ ರಮೇಶ ಜಾರಕಿಹೊಳಿ ಮಾತುಕತೆ ನಡೆಸಲು ಈಗಲೂ ಅವಕಾಶಗಳಿವೆ. ಅವರು ಮೊದಲು ಪಕ್ಷದ ಮುಖಂಡರ ಜೊತೆ ಕುಳಿತು ಮಾತನಾಡಲಿ. ಉಪಚುನಾವಣೆ ಮೇಲೆ ಇವೆಲ್ಲ ಪರಿಣಾಮ ಬೀರುವುದಿಲ್ಲ ಎಂದರು.
ಬಜೆಟ್ ಅಧಿವೇಶನ ನಡೆಯುವ ವೇಳೆ ಆಪರೇಷನ್ ಕಮಲ ಬಗ್ಗೆಯೇ ಚರ್ಚೆ ಆಗಿದೆ. ಬಿಜೆಪಿಯವರು ಮತ್ತೆ ಇನ್ನೊಂದು ಡೆಡ್ ಲೈನ್ ಕೊಟ್ಟಿದಾರೆ ಅಷ್ಟೇ. ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ ಎಂದೂ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.