ADVERTISEMENT

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ನೂತನ ಕುಲಾಧಿಪತಿಯಾಗಿ ವಿಜಯ್ ಗೋಖಲೆ ನೇಮಕ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2023, 15:40 IST
Last Updated 21 ಸೆಪ್ಟೆಂಬರ್ 2023, 15:40 IST
<div class="paragraphs"><p>ವಿಜಯ್ ಗೋಖಲೆ </p></div>

ವಿಜಯ್ ಗೋಖಲೆ

   

ಕಲಬುರಗಿ: ಜಿಲ್ಲೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿಯನ್ನಾಗಿ ಮಾಜಿ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ.

ಇದುವರೆಗೂ ಎನ್‌.ಆರ್. ಶೆಟ್ಟಿ ಅವರು ಕುಲಾಧಿಪತಿಯಾಗಿದ್ದರು. ಅವರ ಅವಧಿ ಮುಗಿದಿದ್ದರಿಂದ ವಿಜಯ್ ಗೋಖಲೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸಿಯುಕೆ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ ತಿಳಿಸಿದ್ದಾರೆ.

ADVERTISEMENT

ವಿಶ್ವವಿದ್ಯಾಲಯ ಆರಂಭವಾದ ಬಳಿಕ ಗೋಖಲೆ ಅವರು ಮೂರನೇ ಕುಲಾಧಿಪತಿಯಾಗಲಿದ್ದಾರೆ. ಯು.ಆರ್. ಅನಂತಮೂರ್ತಿ ಅವರು ಮೊದಲ ಕುಲಾಧಿಪತಿಯಾಗಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.