ADVERTISEMENT

ಜೇವರ್ಗಿ: ಸಿಡಿಲು ಬಡಿದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 12:42 IST
Last Updated 29 ಏಪ್ರಿಲ್ 2021, 12:42 IST

ಜೇವರ್ಗಿ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಮಯೂರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಗುರುವಾರ ಸಂಜೆ ಸಿಡಿಲು‌ ಬಡಿದು ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ಸಿದ್ದಮ್ಮ ಭೀಮಣ್ಣ ಘತ್ತರಗಿ (35) ಸಾವನಪ್ಪಿದ್ದಾರೆ.

ಸಿದ್ದಮ್ಮ ಪಕ್ಕದ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಕೊಕಟನೂರ ಗ್ರಾಮದವರು. ಶೇಂಗಾ ಕಾಯಿ ಬಿಡಿಸಲು ಕೂಲಿ ಕೆಲಸಕ್ಕೆ ಬಂದಿದ್ದ ವೇಳೆ ಸಿಡಿಲು ಬಡಿಯಿತು. ಸಮೀಪದ ಜೇರಟಗಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದರು.

ನೆಲೋಗಿ ಠಾಣೆ ಪಿಎಸ್ಐ ರಾಜಕುಮಾರ ಜಾಮಗೊಂಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.