ADVERTISEMENT

ನ್ಯಾಯಾಂಗ ತನಿಖೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 2:44 IST
Last Updated 10 ಅಕ್ಟೋಬರ್ 2020, 2:44 IST
ಭಾರತೀಯ ಮಹಿಳಾ ಒಕ್ಕೂಟದ ಸದಸ್ಯರು ಕಲಬುರ್ಗಿಯ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ಮಾಡಿದರು
ಭಾರತೀಯ ಮಹಿಳಾ ಒಕ್ಕೂಟದ ಸದಸ್ಯರು ಕಲಬುರ್ಗಿಯ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ಮಾಡಿದರು   

ಕಲಬುರ್ಗಿ:ಉತ್ತರ ಪ್ರದೇಶದ ಹಾಥರಸ್‍ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಭಾರತೀಯ ಮಹಿಳಾ ಒಕ್ಕೂಟ ನೇತೃತ್ವದಲ್ಲಿ ಮಹಿಳೆಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಅಕ್ಕಮಹಾದೇವಿ ಆಶ್ರಮದ ಪ್ರಭುಶ್ರೀ ತಾಯಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು, ಈ ಮೂಲಕ ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ಸಂದೇಶ ರವಾನಿಸಬೇಕು ಎಂದು ಆಗ್ರಹಿಸಿದರು.

‘ಅಮಾನುಷ ಕೃತ್ಯವನ್ನು ಬಯಲಿಗೆ ಬಾರದಂತೆ ತಡೆಯುವ ಪ್ರಯತ್ನ ಮಾಡಲಾಯತು. ಮನಿಷಾಳ ಮೃತ ದೇಹವನ್ನು ಪೋಷಕರಿಗೆ ಹಸ್ತಾಂತರಿಸದೇ ದಹಿಸಿ ಉತ್ತರ ಪ್ರದೇಶ ಪೊಲೀಸರು ಅಮಾನವೀಯವಾಗಿ ವತ್ರಸಿದ್ದಾರೆ. ಶವ ಪೋಷಕರಿಗೆ ನೀಡದಿರುವುದು ಮತ್ತು ವಿರೋಧ ಪಕ್ಷ ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಪೋಷಕರ ಭೇಟಿಗೆ ಬಿಡದಿದ್ದುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪದ್ಮಾವತಿ ಮಾಲಿಪಾಟೀಲ, ಶಿವಲಿಂಗಮ್ಮ ಲಂಡನಕರ್, ವಿಜಯಲಕ್ಷ್ಮಿ ಯಳಸಂಗಿ, ಪ್ರತಿಭಾ ಕುಲಕರ್ಣಿ, ಜನಾಬಾಯಿ ವಗ್ಗಿ, ರುಕ್ಮಿಣಿ, ಚಂದಮ್ಮ, ಜಗದೇವಿ, ಪ್ರತಿಭಾ ಕುಲಕರ್ಣಿ ಇತರರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.