ADVERTISEMENT

ಕಲಬುರ್ಗಿ: ಯಲ್ಲಮ್ಮ ದೇವಸ್ಥಾನ ಹುಂಡಿ ಎಣಿಕೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 1:02 IST
Last Updated 18 ಜನವರಿ 2021, 1:02 IST
ಚಿತ್ತಾಪುರದ ನಾಗಾವಿ ಯಲ್ಲಮ್ಮ ದೇವಸ್ಥಾನದ ಹುಂಡಿ ಹಣವನ್ನು ಶನಿವಾರ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಎಣಿಕೆ ಮಾಡಿದರು
ಚಿತ್ತಾಪುರದ ನಾಗಾವಿ ಯಲ್ಲಮ್ಮ ದೇವಸ್ಥಾನದ ಹುಂಡಿ ಹಣವನ್ನು ಶನಿವಾರ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಎಣಿಕೆ ಮಾಡಿದರು   

ಚಿತ್ತಾಪುರ: ಪಟ್ಟಣದ ಐತಿಹಾಸಿಕ ಕ್ಷೇತ್ರ ನಾಗಾವಿಯಲ್ಲಿರುವ ಯಲ್ಲಮ್ಮ ದೇವಿಯ ದೇವಸ್ಥಾನದ ಹುಂಡಿಯ ಹಣವನ್ನು ತಹಶೀಲ್ದಾರ್ ಕಚೇರಿ ಸಿಬ್ಬಂದಿ ಶನಿವಾರ ಎಣಿಕೆ ಮಾಡಿದರು. ಒಟ್ಟು ₹9.65 ಲಕ್ಷ ಹಣ ಹುಂಡಿಯಲ್ಲಿತ್ತು. ಕಂದಾಯ ಸಿಬ್ಬಂದಿ ಎಣಿಕೆ ಮಾಡಿದರು. ಬ್ಯಾಂಕ್ ಸಿಬ್ಬಂದಿ ಹಣ ಎಣಿಸಿಕೊಂಡು ದೇವಸ್ಥಾನದ ಹೆಸರಲ್ಲಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಿಕೊಂಡರು ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರು ತಿಳಿಸಿದರು.

ಕೊರೊನಾ ಸಂಕಷ್ಟದ ನಂತರ ಮೊದಲ ಬಾರಿಗೆ ದೇವಸ್ಥಾನದ ಹುಂಡಿ ತೆರಯಲಾಯಿತು. ಭಕ್ತರು ಹೆಚ್ಚಿನ ಹಣ ಹುಂಡಿಗೆ ಹಾಕಿದ್ದಾರೆ. ದೇವಿಯ ಜಾತ್ರೆ ರದ್ದಾಗಿದ್ದರಿಂದ ಹುಂಡಿಗೆ ಬರುತ್ತಿದ್ದ ಕಾಣಿಕೆ ಹಣ ಕಡಿಮೆಯಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT