ಕಲಬುರ್ಗಿ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ವಿಮಾನದ ಮೂಲಕ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಬೆಳಿಗ್ಗೆ 8ಕ್ಕೆ ಕಲಬುರ್ಗಿಗೆ ಬರಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ 45 ನಿಮಿಷ ತಡವಾಗಿ ಬಂದಿದೆ.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತಕ್ಕೆ ತೆರಳಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಅಲ್ಲಿಂದ ನೇರವಾಗಿ ಪೊಲೀಸ್ ಪರೇಡ್ ಮೈದಾನಕ್ಕೆ ಬರಲಿದ್ದು, ಧ್ವಜಾರೋಹಣ ನೆರವೇರಿಸುವರು. ನಂತರ ಜಯದೇವ ಆಸ್ಪತ್ರೆ ಕಟ್ಟಡಕ್ಕೆ ಭೂಮಿ ಪೂಜೆ, ನಿರಂತರ ಕುಡಿಯುವ ನೀರು ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವರು.
ನಗರದಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ವಲ್ಲಭಭಾಯಿ ಪಟೇಲ್ ವೃತ್ತಕ್ಕೆ ತೆರಳುವ ಎಲ್ಲ ಮಾರ್ಗಗಳನ್ನು ತಾತ್ಕಾಲಿಕವಾಗಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧಿಸಲಾಗಿದೆ.
ಮುಖ್ಯಮಂತ್ರಿ ಕಾರ್ಯಕ್ರಮವನ್ನು ಯೂಟ್ಯೂಬ್ ಮೂಲಕ ನೇರ ಪ್ರಸಾರ ಮಾಡಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.