ಚಿಂಚೋಳಿ: ತಾಲ್ಲೂಕಿನ ತಾಜಲಾಪುರ ಗ್ರಾಮದಲ್ಲಿ ಭಾನುವಾರ ಹಾವು ಕಚ್ಚಿ ಯುವಕನೊಬ್ಬ ಸಾವನ್ನಪ್ಪಿದ್ದಾರೆ.
ತಾಕಲಾಪುರದ ಅಕ್ಷಯ ನರಸಪ್ಪ (19) ಮೃತ ಯುವಕ. ಬುಧವಾರ ಹಾವು ಕಚ್ಚಿದ್ದರಿಂದ ಅಸ್ವಸ್ಥರಾಗಿದ್ದ ಅಕ್ಷಯ ಅವರನ್ನು ಚಿಕಿತ್ಸೆಗಾಗಿ ಕಲಬುರ್ಗಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.