ಯಡ್ರಾಮಿ (ಕಲಬುರ್ಗಿ ಜಿಲ್ಲೆ): ಜಮೀನಿನಲ್ಲಿ ಕೃಷಿ ಕೆಲಸ ಮಾಡುವ ಸಂದರ್ಭದಲ್ಲಿ ಹಾವು ಕಚ್ಚಿ ಯುವಕ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹಂಗರಗಾ (ಕೆ) ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮಲ್ಲಪ್ಪ ಮಹಾಂತಪ್ಪ (21) ಮೃತ ಯುವಕ. ಕುಟುಂಬದ ಸದಸ್ಯರೊಂದಿಗೆ ಜಮೀನಿಗೆ ತೆರಳಿ ಕಸ ತೆಗೆಯುತ್ತಿರುವಾಗ ಕಸದಲ್ಲಿದ್ದ ಹಾವು ಕಚ್ಚಿದೆ.
ತಕ್ಷಣ ಚಿಕಿತ್ಸೆಗೆ ಯಡ್ರಾಮಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಯುವಕ ಮೃತಪಟ್ಟಿದ್ದಾನೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.