ADVERTISEMENT

ಜೇವರ್ಗಿ: ಪ್ರವಾಹಕ್ಕೆ ಕೊಚ್ಚಿ ಹೋದ ಯುವಕ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2020, 15:37 IST
Last Updated 14 ಅಕ್ಟೋಬರ್ 2020, 15:37 IST
ಭಾಗಣ್ಣ
ಭಾಗಣ್ಣ   

ಜೇವರ್ಗಿ: ತಾಲ್ಲೂಕಿನ ನರಿಬೋಳ ಗ್ರಾಮದ ಭೀಮಾನದಿ ಪ್ರವಾಹಕ್ಕೆ ಯುವಕನೊಬ್ಬ ಕೊಚ್ಚಿಕೊಂಡು ಹೋದ ಬಗ್ಗೆ ವರದಿಯಾಗಿದೆ.

ಮಂಗಳವಾರ ಸಂಜೆ ಭಾಗಣ್ಣ ತಿಪ್ಪಣ್ಣ ಹಡಪದ (21) ಎಂಬ ಯುವಕ ನೀರು ತರಲು ನದಿಗೆ ತೆರಳಿದಾಗ ನದಿಯ ನೀರಿನ ರಭಸಕ್ಕೆ ಕಾಲು ಜಾರಿ ಕೊಚ್ಚಿಕೊಂಡು ಹೋಗಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಬುಧವಾರ ಘಟನಾ ಸ್ಥಳಕ್ಕೆ ತಹಶೀಲ್ದಾರ್ ಸಿದರಾಯ ಭೋಸಗಿ, ಪಿಎಸ್‍ಐ ಮಂಜುನಾಥ ಹೂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೋಟ್ ಮೂಲಕ ಶವದ ಶೋಧ ಕಾರ್ಯ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.