ADVERTISEMENT

ಪ್ರಿಯಾಂಕಾ ಬಂಧನ: ಯುವ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 6:10 IST
Last Updated 5 ಅಕ್ಟೋಬರ್ 2021, 6:10 IST
ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಅವರ ಬಂಧನ ಖಂಡಿಸಿ ಕಲಬುರ್ಗಿಯಲ್ಲಿ ಸೋಮವಾರ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಅವರ ಬಂಧನ ಖಂಡಿಸಿ ಕಲಬುರ್ಗಿಯಲ್ಲಿ ಸೋಮವಾರ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಕಲಬುರ್ಗಿ: ಉತ್ತರ ಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ‍ಪ್ರಿಯಾಂಕಾ ವಾದ್ರಾ ಅವರನ್ನು ಬಂಧಿಸಿದ ಘಟನೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಯುವ ಘಟಕದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್‌ ಧ್ವಜ ಹಿಡಿದು ಮೆರವಣಿಗೆ ನಡೆಸಿದ ಕಾರ್ಯರ್ತರು, ಜಹತ್‌ ವೃತ್ತ, ಜಿಲ್ಲಾಧಿಕಾ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು. ಕೇಂದ್ರ ಸರ್ಕಾರ ಹಾಗೂ ಉತ್ತರಪ್ರದೇಶ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಉತ್ತರ ಪ್ರದೇಶದ ಲಖೀಮಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ಮೊಂಡುತನ ಕಾರಣ ಈ ಪ್ರತಿಭಟನೆಯಲ್ಲಿ ಭಾನುವಾರ ಹಿಂಸಾಚಾರ ನಡೆದಿದೆ. ಇದರಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಜನರು ಮೃತಪಟ್ಟಿದ್ದಾರೆ. ಇದರ ಹೊಣೆಯನ್ನು ಯೋಗಿ ಆದಿನಾಥ ಅವರ ಸರ್ಕಾರವೇ ಹೊರಬೇಕು ಎಂದು ಘೋಷಣೆ ಕೂಗಿದರು.

ADVERTISEMENT

ರೈತರನ್ನು ಭೇಟಿಯಾಗಲು ಹೊರಟ ನಮ್ಮ ನಾಯಕಿ ಪ್ರಿಯಾಂಕಾ ವಾದ್ರಾ ಅವರನ್ನು ತಡೆಯಲು ಸರ್ಕಾರ ಅವರನ್ನು ಬಂಧಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ ತಕ್ಷಣ ಅವರನ್ನು ಬಿಡುಗಡೆ ಮಾಡಬೇಕು, ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಬೇಕು ಎಂದೂ ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್‌ ಯುವ ಘಟಕದ ಅಧ್ಯಕ್ಷ ಶಿವಾನಂದ ಹೊನಗುಂಟಿ, ಮುಖಂಡರಾದ ಈರಣ್ಣ ಝಳಕಿ, ಪರಾಜ ಕಮುರಲ್ ಇಸ್ಲಾಂ, ಲತಾ ರಾಠೋಡ, ವಾಣಿಶ್ರೀ ಸಗರಕರ್, ಶರಣು ಡೋಣಗಾಂವ, ಪರುಸುರಾಮ ನಾಟಿಕರ, ಅಶೋಕ ಕಪ್ಪನೂರ, ಅಸವಿನ ಸಂಕಾ, ಅಮರ ಶಿರವಾಳ, ಹರಶದ್ ಖಾನ್, ರಕಿಬ್, ಸಂತೋಷ ನಾಟಿಕರ್, ಮಹೇಶ, ಮಸ್ತಾನ್ ಪಠಾಣ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.