ಕಲಬುರ್ಗಿ: ನಗರದ ಪಬ್ಲಿಕ್ ಗಾರ್ಡನ್ ಎದುರಿನ ರಸ್ತೆಯಲ್ಲಿ ಗುರುವಾರ ನಾಲ್ವರು ದುಷ್ಕರ್ಮಿಗಳ ತಂಡವೊಂದು ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದೆ.
ರಾಣೇಶಫಿರ್ ದರ್ಗಾ ನಿವಾಸಿ, ಎಸ್ಬಿಆರ್ ಕಾಲೇಜಿನ ವಿದ್ಯಾರ್ಥಿ ವೀರೇಶ ಶರಣಬಸಪ್ಪ ಕಡಗಂಚಿ (21) ಕೊಲೆಯದವರು. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ವೀರೇಶಗೆ ಬಲವಾಗಿ ಚಾಕುವಿನಿಂದ ಇರಿದಿದ್ದಾರೆ. ಎಷ್ಟೋ ಹೊತ್ತು ರಕ್ತದ ಮಡುವಿನಲ್ಲೇ ಬಿದ್ದಿದ್ದ ವೀರೇಶಗೆ ಸಾರ್ವಜನಿಕರು ನೀರು ಕುಡಿಸಲು ಯತ್ನಿಸಿ, ಆಂಬುಲೆನ್ಸ್ಗೆ ಕರೆ ಮಾಡಿ ಮಾಹಿತಿ ನೀಡಿದರು.
‘ತೀವ್ರ ರಕ್ತಸ್ರಾವವಾದ್ದರಿಂದ ಆಸ್ಪತ್ರೆಗೆ ಕರೆದೊಯ್ದ ಕೆಲ ಹೊತ್ತಿನಲ್ಲಿ ವೀರೇಶ ಮೃತಪಟ್ಟರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರಪುಡಿ ಅಂಬು, ಭವನ್, ಕಾಳು ಮತ್ತು ದಾದು ಎಂಬುವರು ಕೃತ್ಯವನ್ನೆಸಗಿದ್ದಾರೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ’ ಎಂದು ಕಲಬುರ್ಗಿ ಪೊಲೀಸ್ ಕಮಿಷನರ್ ಸತೀಶಕುಮಾರ್ ಎನ್. ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.