ADVERTISEMENT

ಕಾವೇರಿ: ಬಿಎಸ್‌ಎನ್‌ಎಲ್ ಕಚೇರಿಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2012, 8:55 IST
Last Updated 9 ಅಕ್ಟೋಬರ್ 2012, 8:55 IST

ಕುಶಾಲನಗರ: ಕಾವೇರಿ ವಿವಾದವನ್ನು ಇತ್ಯರ್ಥಪಡಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಪಡೆಯ ಜಿಲ್ಲಾಧ್ಯಕ್ಷ ಎಂ.ಕೃಷ್ಣ ನೇತೃತ್ವದಲ್ಲಿ ಕಾವಲುಪಡೆಯ ಕಾರ್ಯಕರ್ತರು ಸೋಮವಾರ ಕುಶಾಲನಗರ ಪಟ್ಟಣದಲ್ಲಿ ಬಿಎಸ್‌ಎನ್‌ಎಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು

ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮುಂದೆ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ಅ. 12 ಕ್ಕೆ ಮುಂದೂ ಡಲ್ಪಟ್ಟ ಹಿನ್ನಲೆಯಲ್ಲಿ ಕಾವಲುಪಡೆಯ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಾವೇರಿ ಮಧ್ಯಂತರ ಅರ್ಜಿ ವಿಚಾರಣೆಯನ್ನು ಉದ್ದೇಶ ಪೂರ್ವಕವಾಗಿ ಮುಂದೂಡ ಲಾಗಿದೆ ಎಂದು ಕೃಷ್ಣ ದೂರಿದರು.

ರಾಜ್ಯದ ಜಲಾಶಯಗಳಲ್ಲಿ ಉಳಿದಿರುವ ನೀರನ್ನು ತಮಿಳುನಾಡಿಗೆ ಬಿಡಬಾರದು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.