ಕುಶಾಲನಗರ: ಉತ್ತರ ಕೊಡಗಿನ ಗಡಿ ಗ್ರಾಮವಾದ ಶಿರಂಗಾಲದ ಕಾವೇರಿ ನದಿಯಿಂದ ನಿಯಮ ಬಾಹಿರವಾಗಿ ಮರಳು ಸಾಗಾಣಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಾರ್ವಜನಿಕರು ಬುಧವಾರ ಪಟ್ಟಣದಲ್ಲಿ ಮರಳು ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಸಾರ್ವಜನಿಕರು ಇಲ್ಲಿಯ ಸೋಮನಾಥೇಶ್ವರ ದೇವಸ್ಥಾನದ ಬಳಿ ಮರಳು ಸಾಗಿಸುತ್ತಿದ್ದ ಲಾರಿಗಳನ್ನು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿದರು.
ಕೆಲವರು ಪರ್ಮಿಟ್ಗಿಂತ ಹೆಚ್ಚುವರಿ ಮರಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವ ಮೂಲಕ ಸರ್ಕಾರಕ್ಕೆ ವಂಚಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಅಕ್ರಮ ಮರಳು ದಂಧೆಯಲ್ಲಿ ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ ಕೂಡ ಶಾಮೀಲಾಗಿವೆ ಎಂದು ಜಿ.ಪಂ. ಮಾಜಿ ಅಧ್ಯಕ್ಷ ಎಚ್.ಎಸ್.ಅಶೋಕ್ ಮತ್ತಿತರರು ದೂರಿದರು
ಪ್ರತಿಭಟನೆಯಲ್ಲಿ ಪುಲಿಯಂಡ ರಾಮು, ಹೇಮಂತ್, ಪವನ್ ಕುಮಾರ್, ಪ್ರಸಾದ್ ರೈ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.