ADVERTISEMENT

ಕೆನರಾ ಬ್ಯಾಂಕ್ ದರೋಡೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2013, 6:26 IST
Last Updated 19 ಏಪ್ರಿಲ್ 2013, 6:26 IST

ಮಡಿಕೇರಿ: ಇಲ್ಲಿಗೆ ಸಮೀಪದ ಮಕ್ಕಂದೂರು ಕೆನರಾ ಬ್ಯಾಂಕ್‌ಗೆ ಕನ್ನ ಹಾಕಿದ್ದ ಖದೀಮರು ದರೋಡೆ ನಡೆಸಲು ಮಾಡಿದ ಪ್ರಯತ್ನ ವಿಫಲವಾದ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ. ಪ್ರಕರಣವು ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ರಾತ್ರಿ ವೇಳೆ ಬ್ಯಾಂಕಿನ ಹಿಂಬದಿ ಗೋಡೆಗೆ ಕನ್ನ ಕೊರೆದ ಖದೀಮರು ಬ್ಯಾಂಕ್ ಒಳಗೆ ನುಗ್ಗಿದ್ದಾರೆ. ಭದ್ರತಾ ಕೊಠಡಿಯ ಬಾಗಿಲು ತೆರೆಯಲು ಸಾಕಷ್ಟು ಕಸರತ್ತು ನಡೆಸಿದ್ದರು. ಆದರೆ, ಭದ್ರತಾ ಕೊಠಡಿಯನ್ನು ಭೇದಿಸಲು ಅವರಿಂದ ಸಾಧ್ಯವಾಗಿಲ್ಲ. ಇದರಿಂದ ನಿರಾಶರಾದ ಖದೀಮರು ಅಲ್ಲಿಂದ ಪರಾರಿಯಾದರು.

ಬೆಳಿಗ್ಗೆ ಪೊಲೀಸರು ಶ್ವಾನದಳ ಹಾಗೂ ಬೆರಳಚ್ಚು ತಜ್ಞ ತಂಡರ ಜೊತೆ ಭೇಟಿ ನೀಡಿ, ಘಟನಾ ಸ್ಥಳದ ಪರಿಶೀಲನೆ ನಡೆಸಿದರು. ಪ್ರಕರಣವನ್ನು ದಾಖಲಿಸಿಕೊಂಡಿರುವ ಮಡಿಕೇರಿ ಗ್ರಾಮಾಂತರ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.