ADVERTISEMENT

ಜಮ್ಮಾ ಬಾಣೆ- ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 8:10 IST
Last Updated 12 ಅಕ್ಟೋಬರ್ 2011, 8:10 IST

ಮಡಿಕೇರಿ: ಕೊಡಗಿನ ಜನರನ್ನು ಹಲವಾರು ವರ್ಷಗಳಿಂದ ಕಾಡುತ್ತಿರುವ ಜಮ್ಮಾ ಬಾಣೆ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆದಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬಗೆಹರಿಯುವ ವಿಶ್ವಾಸ ತಮಗಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಮ್ಮಾ ಬಾಣೆ ವಿಷಯವು ಕಳೆದ ಬಾರಿಯ ಸಚಿವ ಸಂಪುಟದಲ್ಲಿಯೇ ಚರ್ಚೆಗೆ ಬಂದಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಕುಮ್ಕಿ, ಇತರ ಜಮೀನುಗಳನ್ನು ಇದರಲ್ಲಿ ಸೇರ್ಪಡಿಸಲು ಪ್ರಯತ್ನಿಸಿದ್ದರಿಂದ ಪರಿಹಾರವಾಗದೇ ಕಗ್ಗಂಟಾಗಿಯೇ ಉಳಿಯಿತು ಎಂದರು.

ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರಿಗೆ ಕೊಡಗಿನ ಜಮ್ಮಾ ಬಾಣೆ ಸಮಸ್ಯೆಯ ನಿಜಸ್ಥಿತಿ ಗೊತ್ತಿದೆ. ಹೀಗಾಗಿ ಈ ಬಾರಿಯ ಸಭೆಯಲ್ಲಿ ಬಗೆಹರಿಯುವ ಸಾಧ್ಯತೆ ಇದೆ ಎಂದರು.

ಸಚಿವ ಸಂಪುಟದ ಉಪಸಮಿತಿಗೆ ಜಮ್ಮಾ ಬಾಣೆ ವಿಷಯವನ್ನು ವಹಿಸುವ ಸಾಧ್ಯತೆ ಇಲ್ಲ. ನೇರವಾಗಿ ಸಚಿವ ಸಂಪುಟವೇ ಇದರ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.