ADVERTISEMENT

ನಗರದಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ

ಮಡಿಕೇರಿ ಕ್ಷೇತ್ರದ ಜನರು ಬದಲಾವಣೆ ಬಯಸಿದ್ದಾರೆ–ಚಂದ್ರಕಲಾ

​ಪ್ರಜಾವಾಣಿ ವಾರ್ತೆ
Published 4 ಮೇ 2018, 10:22 IST
Last Updated 4 ಮೇ 2018, 10:22 IST

ಮಡಿಕೇರಿ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ.ಚಂದ್ರಕಲಾ ಅವರು ನಗರದಲ್ಲಿ ಗುರುವಾರ ಬಿರುಸಿನ ಪ್ರಚಾರ ನಡೆಸಿದರು.

ಚಂದ್ರಕಲಾ ಅವರಿಗೆ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವೀಂದ್ರ ಅಪ್ರು ಸಾಥ್‌ ನೀಡಿದರು.

ಇದೇ ವೇಳೆ ಚಂದ್ರಕಲಾ ಮಾತನಾಡಿ, ‘ಮಡಿಕೇರಿ ಕ್ಷೇತ್ರದ ಜನರು ಬದಲಾವಣೆಯನ್ನು ಬಯಸಿದ್ದು, ಮಹಿಳಾ ಅಭ್ಯರ್ಥಿಯಾಗಿರುವ ನನ್ನನ್ನು ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವಿದೆ’ ಎಂದು ಹೇಳಿದರು.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರವಾದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿದೆ. ಇದೇ ಕಾರಣದಿಂದ ಕೊಡಗಿನ ಮತದಾರರು ಕೂಡ ಈ ಬಾರಿ ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ ಎಂದರು.

ಕೆ.ಯು. ಅಬ್ದುಲ್‌ ರಜಾಕ್ ಮಾತನಾಡಿ, ಇಡೀ ಮಹಿಳಾ ಸಮೂಹ ಚಂದ್ರಕಲಾ ಅವರ ಪರವಾಗಿ ನಿಂತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜುಲೇಕಾಬಿ, ಚುಮ್ಮಿದೇವಯ್ಯ, ಪಕ್ಷದ ಪ್ರಮುಖರಾದ ಚಂದ್ರಶೇಖರ್, ಮ್ಯಾಥ್ಯು, ಅಂಬೆಕಲ್ಲು ನವೀನ್ ಕುಶಾಲಪ್ಪ, ಮುನೀರ್ ಅಹಮ್ಮದ್, ನಗರಸಭೆಯ ಕಾಂಗ್ರೆಸ್‌ನ ಹಾಲಿ ಹಾಗೂ ಮಾಜಿ ಸದಸ್ಯರು ಮತ್ತು ಕಾರ್ಯಕರ್ತರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.