ಮಡಿಕೇರಿ: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನ. 26ರಂದು ‘ಕೊಡವ ನ್ಯಾಷನಲ್ ಡೇ’ ಸಮಾವೇಶ ಆಯೋಜಿಸಲಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ನ ಅಧ್ಯಕ್ಷ ಎನ್.ಯು. ನಾಚಪ್ಪ ಮಾಹಿತಿ ನೀಡಿದರು.
ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಗಾಂಧಿ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಹಿರಿಯ ರಾಜಕೀಯ ಮುಖಂಡ ಡಾ.ಸುಬ್ರಮಣಿಯನ್ ಸ್ವಾಮಿ ಅವರು ‘ಕೊಡವ ಸ್ವಾತಂತ್ರ್ಯಾನ್ವೇಷಣೆ ಮತ್ತು ಜಾಗತಿಕ ರಾಜಕೀಯ ವಿದ್ಯಮಾನ’ ಕುರಿತು ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಅಖಿಲ ಭಾರತ ವಿರಾಟ್ ಹಿಂದೂ ಸಂಗಮ್ನ ಜಗದೀಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಸಮಸ್ತ ಕೊಡವ ಬಾಂಧವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಮುಖಂಡ ಕಲಿಯಂಡ ಪ್ರಕಾಶ್, ಪುಲ್ಲೆರ ಕಾಳಪ್ಪ, ಚಂಬಂಡ ಜನತ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.