ಕುಶಾಲನಗರ: ಸಮೀಪದ ಬೈಲುಕುಪ್ಪೆ ಟಿಬೆಟಿಯನ್ನರ ನಿರಾಶ್ರಿತರ ಶಿಬಿರಕ್ಕೆ ಮಂಗಳವಾರ ಬೌದ್ಧಧರ್ಮ ಗುರು ದಲೈಲಾಮಾ ಭೇಟಿ ನೀಡಿದರು. ದಲೈಲಾಮಾ ಅವರಿಗೆ ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತ ಕೋರಲಾಯಿತು. ಟಿಬೆಟಿಯನ್ನರ ಶಿಬಿರದಲ್ಲಿ ಸಂಭ್ರಮ ಮನೆ ಮಾಡಿತ್ತು.
ಬಂದೋಬಸ್ತ್: ದಲೈಲಾಮ ಆಗಮನದ ಹಿನ್ನೆಲೆಯಲ್ಲಿ ಬೈಲುಕುಪ್ಪೆ ನಿರಾಶ್ರಿತರ ಶಿಬಿರಕ್ಕೆ ಬಿಗಿ ಪೊಲೀಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಚೇತ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಸನ್ಮಾನ: ಕುಶಾಲನಗರ ರೋಟರಿ ಸಂಸ್ಥೆ ಪದಾಧಿಕಾರಿಗಳು ದಲೈಲಾಮ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಸದಸ್ಯರಾದ ಎ.ಎ. ಚಂಗಪ್ಪ, ವಕೀಲ ಜವರೇಗೌಡ, ಎಚ್.ವಿ. ಶಿವಪ್ಪ, ಜೆ.ಪಿ. ಅರಸ್, ನವೀನ್, ರಾಜಗಜೇಂದ್ರ ಸ್ವಾಮೀಜಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.