ADVERTISEMENT

ಶನಿವಾರಸಂತೆ: ಲಕ್ಷ ದೀಪೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2017, 6:27 IST
Last Updated 19 ನವೆಂಬರ್ 2017, 6:27 IST

ಶನಿವಾರಸಂತೆ: ಪಟ್ಟಣದ ಚಂದ್ರಮೌಳೇಶ್ವರ–ಪಾರ್ವತಿ–ಗಣಪತಿ ದೇವಾಲಯದಲ್ಲಿ ಶುಕ್ರವಾರ ರಾತ್ರಿ ಲಕ್ಷ ದೀಪೋತ್ಸವ ಪ್ರಯುಕ್ತ ವಿಶೇಷ ದೀಪಾರಾಧನೆ ನಡೆಯಿತು.

ಶಿವನಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಅಷ್ಟೋತ್ತರ ಪೂಜೆ, ಪಾರ್ವತಿ ದೇವಿಗೆ ಕುಂಕುಮಾರ್ಚನೆ, ಗಣಪತಿಗೆ ಸುವರ್ಣಾಲಂಕಾರ ಮಾಡಿ ಪೂಜಿಸಲಾಯಿತು. ಭಕ್ತಾದಿಗಳು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

ಅರ್ಚಕ ಮಾಲತೇಶ್ ಭಟ್ ಹಾಗೂ ಶೇಷಾಚಲ ಭಟ್ ಪೂಜಾವಿಧಿಗಳನ್ನು ನೆರವೇರಿಸಿದರು. ದೇವಾಲಯ ಪ್ರಾಂಗಣ ಹಾಗೂ ಆವರಣದಲ್ಲಿ ಭಕ್ತರು ಲಕ್ಷ ದೀಪಗಳನ್ನು ಬೆಳಗಿಸಿ ಸಂಭ್ರಮಿಸಿದರು. ಪೂಜೆ, ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ADVERTISEMENT

ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.ಬಳಿಕ ನಡೆದ ಸಿಡಿಮದ್ದು ಪ್ರದರ್ಶನ ಜನಮನ ರಂಜಿಸಿತು. ದೇವಾಲಯ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಗೌರವಾಧ್ಯಕ್ಷ ಶರತ್ ಶೇಖರ್, ಪದಾಧಿಕಾರಿಗಳಾದ ಎನ್.ಪಿ.ರವಿ, ಜಿ.ಬಿ.ಕುಮಾರ್, ಪ್ರದೀಪ್, ಧನಂಜಯ್, ಎನ್.ಬಿ.ರವಿ, ಮಹೇಶ್, ಸಂತೋಷ್, ಪ್ರಕಾಶ್ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.