ADVERTISEMENT

ಶಾಲಾ ಕೊಠಡಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2012, 10:40 IST
Last Updated 28 ಜನವರಿ 2012, 10:40 IST

ಸೋಮವಾರಪೇಟೆ: ಸಮೀಪದ ಕುಂಬೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ನಿರ್ಮಿಸಲಾದ ಮುಖ್ಯ ಶಿಕ್ಷಕರ ನೂತನ ಕೊಠಡಿಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಈಚೆಗೆ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಗ್ರಾಮೀಣ ಭಾಗದಿಂದ ಬರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಟಿ.ಪಿ.ಸಂದೇಶ್, ಗೇಟ್ ದಾನಿಗಳಾದ ಕೆ.ಎಸ್.ಪ್ರಕಾಶ್, ಎಸ್‌ಡಿಎಂಸಿ ಅಧ್ಯಕ್ಷ ಎಂ.ಎ.ಚಂದ್ರ, ಸದಸ್ಯರಾದ ಮಾಳೆಯಂಡ ಜೋಯಪ್ಪ, ಮಾದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಕೆ.ಭಾಸ್ಕರ್ ಸಾಯಿ, ಸದಸ್ಯರಾದ ಮಾದಪ್ಪ, ಸುಬ್ರಮಣಿ, ಗಣೇಶ್, ಇಂದಿರಾ, ಸುಮಿತ ಜರ್ಮಿ ಇತರರು ಇದ್ದರು. ಮುಖ್ಯ ಶಿಕ್ಷಕಿ ಕೆ.ಕೆ.ಸರೋಜ ಸ್ವಾಗತಿಸಿ, ಶಿಕ್ಷಕಿಯರಾದ ಎಂ.ಟಿ.ಸರಳ ಕುಮಾರಿ ವಂದಿಸಿ, ಸ್ವಪ್ನಾ ಜೋಸೆಫ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.