ಮಡಿಕೇರಿ: ಕೊಡಗು ಜಿಲ್ಲಾಧಿಕಾರಿ ಯಾಗಿದ್ದ ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರನ್ನು ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಶ್ರೀವಿದ್ಯಾ ಅಧಿಕಾರ ವಹಿಸಿಕೊಂಡಿದ್ದಾರೆ.
ಡಿಸೋಜಾ ಅವರನ್ನು ಹಟ್ಟಿ ಚಿನ್ನದ ಗಣಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಶ್ರೀವಿದ್ಯಾ ಅವರು 2010ರ ಐಎಎಸ್ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದು, 2013ರ ನ.16ರಿಂದ 2014ರ ಮೇ 20ರವರೆಗೆ (ಆರು ತಿಂಗಳು) ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.