ADVERTISEMENT

ಸಂಚಾರ ಸುವ್ಯವಸ್ಥೆಗೆ ಕಾಂಗ್ರೆಸ್ ಒತ್ತಾಯ

​ಪ್ರಜಾವಾಣಿ ವಾರ್ತೆ
Published 10 ಜನವರಿ 2013, 6:42 IST
Last Updated 10 ಜನವರಿ 2013, 6:42 IST
ಮಡಿಕೇರಿಯಲ್ಲಿ ಬುಧವಾರ ನಗರ ಕಾಂಗ್ರೆಸ್ ಪದಾಧಿಕಾರಿಗಳು ನಗರದ ಸಂಚಾರ ವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಜಿಲ್ಲಾ ಪೊಲೀಸ್ ಉಪ ವರಿಷ್ಠಾಧಿಕಾರಿ ರಾಜೀವ್ ಮಾಂಗ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಹಾರೂನ್, ನಗರಸಭೆ ಸದಸ್ಯ ಚುಮ್ಮಿದೇವಯ್ಯ, ಅಬ್ದುಲ್ ರಜಾಕ್ ಹಾಜರಿದ್ದರು.
ಮಡಿಕೇರಿಯಲ್ಲಿ ಬುಧವಾರ ನಗರ ಕಾಂಗ್ರೆಸ್ ಪದಾಧಿಕಾರಿಗಳು ನಗರದ ಸಂಚಾರ ವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಜಿಲ್ಲಾ ಪೊಲೀಸ್ ಉಪ ವರಿಷ್ಠಾಧಿಕಾರಿ ರಾಜೀವ್ ಮಾಂಗ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಹಾರೂನ್, ನಗರಸಭೆ ಸದಸ್ಯ ಚುಮ್ಮಿದೇವಯ್ಯ, ಅಬ್ದುಲ್ ರಜಾಕ್ ಹಾಜರಿದ್ದರು.   

ಮಡಿಕೇರಿ: ನಗರದಲ್ಲಿ ವಾಹನ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸರಿಪಡಿಸುವಂತೆ ಒತ್ತಾಯಿಸಿ ಮಡಿಕೇರಿ ನಗರ ಕಾಂಗ್ರೆಸ್ ಪದಾಧಿಕಾರಿಗಳು ಬುಧವಾರ ಜಿಲ್ಲಾ ಪೊಲೀಸ್ ಉಪ ವರಿಷ್ಠಾಧಿಕಾರಿ ರಾಜೀವ್ ಮಾಂಗ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಾದಚಾರಿಗಳ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನಗರದ ಸಂಚಾರಿ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ಮಾಡುವಂತೆ ಅವರು ಆಗ್ರಹಿಸಿದರು.

ಮೈಸೂರು ರಸ್ತೆ ಹಾಗೂ ಮಂಗಳೂರು ರಸ್ತೆಯಲ್ಲಿ ಈಗ ವಾಹನ ನಿಲುಗಡೆಗೆ ಅವಕಾಶ ನೀಡಿರುವ ಪ್ರದೇಶಗಳನ್ನು ಬದಲಾವಣೆ ಮಾಡಬೇಕು.  ನಗರದ ಮದ್ಯಭಾಗದಲ್ಲಿ ಅತಿಹೆಚ್ಚು ವಾಹನ ಸಂಚಾರ ಹಾಗೂ ಪಾದಚಾರಿಗಳ ಓಡಾಟ ಹೆಚ್ಚಿರುವ ಕಾರಣ ಬಸ್, ಟ್ರಕ್ ಸೇರಿದಂತೆ ಭಾರಿ ವಾಹನಗಳ ಸಂಚಾರವನ್ನು ರಾಜಾಸೀಟ್ ಮಾರ್ಗವಾಗಿ ಓಡಿಸಲು ಕ್ರಮ ವಹಿಸುವಂತೆ ಒತ್ತಾಯಿಸಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಹಾರೂನ್, ನಗರಸಭೆ ಸದಸ್ಯರಾದ ಚುಮ್ಮಿದೇವಯ್ಯ, ಅಬ್ದುಲ್ ರಜಾಕ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.