ADVERTISEMENT

ಸಂಭ್ರಮದ ಮಸಣೀಕಮ್ಮ ಜಾತ್ರೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2014, 6:41 IST
Last Updated 14 ಮಾರ್ಚ್ 2014, 6:41 IST

ಪಿರಿಯಾಪಟ್ಟಣ: ಪಟ್ಟಣದ ಗ್ರಾಮ ದೇವತೆ ಮಸಣೀಕಮ್ಮ ದೇವತೆಯ ರಥೋತ್ಸವ ಗುರುವಾರ ಸಂಭ್ರಮದಿಂದ ಜರುಗಿತು.
ರಥೋತ್ಸವದ ಪ್ರಯುಕ್ತ ಮುಂಜಾನೆಯಿಂದ ವಿವಿಧ ದೇವತಾ ಕಾರ್ಯಗಳು ಜರುಗಿದವು. ಜಾತ್ರಾ ಮಹೋತ್ಸವ ಅಂಗವಾಗಿ ದೇವರ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿ ಬಿ.ಎಂ. ರಸ್ತೆಯಲ್ಲಿ ಎಳೆದು ತರಲಾಯಿತು. ತಾಲ್ಲೂಕಿನ ಸುತ್ತಮುತ್ತಲಿನ ಹಲವು ಗ್ರಾಮಗಳಿಂದ  ಭಕ್ತರು ಭಾಗವಹಿಸಿದ್ದರು.

ಹಣ್ಣು ಜವನ ಎಸೆದು ತಮ್ಮ ಭಕ್ತಿ ಸಮರ್ಪಿಸಿದರು. ಜಾತ್ರೆಯ ಪ್ರಯುಕ್ತ ಭಕ್ತರಿಗೆ ವಿವಿಧ ಸಂಘ ಸಂಸ್ಥೆಗಳಿಂದ 40ಕ್ಕೂ ಹೆಚ್ಚು ಕಡೆಗಳಲ್ಲಿ ಮಜ್ಜಿಗೆ, ಪಾನಕ ಮತ್ತು ಪ್ರಸಾದ ವಿನಿಯೋಗ ನಡೆಯಿತು

ವಚನ ಸಾಹಿತ್ಯ: ಬರಗೂರು ಉಪನ್ಯಾಸ ನಾಳೆ
ಮೈಸೂರು: ಇಲ್ಲಿಯ ರಂಗಾಯಣದ ವನರಂಗದಲ್ಲಿ ಮಾರ್ಚ್‌ 15ರಂದು ಸಂಜೆ 5 ಗಂಟೆಗೆ  ಮಾನಸಗಂಗೋತ್ರಿಯ ಬಸವೇಶ್ವರ ಸಾಮಾಜಿಕ ಪರಿಷ್ಕರಣ ಸಂಶೋಧನ ಹಾಗೂ ವಿಸ್ತರಣಾ ಕೇಂದ್ರದ ಸಂದರ್ಶನ ಪ್ರಾಧ್ಯಾಪಕ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ‘ವಚನ ಸಾಹಿತ್ಯ ಮತ್ತು ಮೂಢನಂಬಿಕೆಯ ಪ್ರಶ್ನೆ’ ಕುರಿತು ಉಪನ್ಯಾಸ ನೀಡುವರು. ಇದು ವಚನ ಸಾಹಿತ್ಯದ ಪ್ರಚಾರೋಪನ್ಯಾಸ ಮಾಲೆಯಡಿ ನಡೆಯಲಿದೆ. ರಂಗಾಯಣ ನಿರ್ದೇಶಕ ಎಚ್‌. ಜನಾರ್ದನ್ ಅಧ್ಯಕ್ಷತೆ ವಹಿಸುವರು. ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ರಂಗಾಯಣ ಹಾಗೂ ಬಸವೇಶ್ವರ ಸಾಮಾಜಿಕ ಪರಿಷ್ಕರಣ ಸಂಶೋಧನ ಮತ್ತು ವಿಸ್ತರಣ ಕೇಂದ್ರದಡಿ ಆಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.