ADVERTISEMENT

ಸೊರಗಿದ ಚೆಲುವೆಯರು!

​ಪ್ರಜಾವಾಣಿ ವಾರ್ತೆ
Published 18 ಜುಲೈ 2012, 4:35 IST
Last Updated 18 ಜುಲೈ 2012, 4:35 IST

ನಾಪೋಕ್ಲು: ಸಮೀಪದ ನರಿ ಯಂದಡ ಗ್ರಾಮಪಂಚಾಯತಿ ವ್ಯಾಪ್ತಿಯ ಚೇಲಾವರ ಗ್ರಾಮ ದಲ್ಲಿರುವ ಎರಡು ರಮಣೀಯ ಜಲಪಾತಗಳು ಪ್ರತಿವರ್ಷ ಮಳೆಗಾಲದ ಈ ಅವಧಿಗೆ ತಮ್ಮ ಚೆಲುವಿನಿಂದ ಪ್ರವಾಸಿಗರ ಮನಸೆಳೆ ಯುತ್ತಿದ್ದರೆ ಈ ವರ್ಷ ಜಲಪಾತದ ಭೋರ್ಗರೆತ ಕೇಳಿಸುತ್ತಿಲ್ಲ. ಮಳೆಯ ಕೊರತೆಯಿಂದ ಜಲಪಾತ ಸೊರಗಿವೆ.

ಕೊಡಗಿನ ಅತಿ ಎತ್ತರವಾದ ತಡಿಯಂಡಮೋಳ್ ಶಿಖರ, ಬ್ರಹ್ಮಗಿರಿ ಬೆಟ್ಟಸಾಲುಗಳು ಮುಗಿಲನ್ನು ಚುಂಬಿಸುತ್ತ ನಿಂತಿದ್ದರೆ ಈ ಬೆಟ್ಟಸಾಲುಗಳ ಕಣಿವೆಗಳಿಂದ ಹಲವಾರು ನದಿಗಳು ಉಗಮಿಸಿ ಹರಿದು ಬರುತ್ತವೆ. ಬ್ರಹ್ಮಗಿರಿ ಬೆಟ್ಟದ ಬುಡದಿಂದ ಕೊಡಗಿನ ಪವಿತ್ರ ನದಿ ಕಾವೇರಿ ಉಗಮಿಸುತ್ತಾಳೆ. ಇತ್ತ ತಡಿಯಂಡಮೋಳ್ ಶಿಖರದ ಸರ ಹದ್ದಿನಲ್ಲಿರುವ ಇಗ್ಗುತ್ತಪ್ಪ ಬೆಟ್ಟದಿಂದ ಬಲಿಯಟ್ರ ನದಿ ಮತ್ತು ಚೋಮ ಕುಂದು ಬೆಟ್ಟದಿಂದ ಸೋಮನ ನದಿ ಹರಿದು ಬರುತ್ತದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.