ADVERTISEMENT

‘ಸದಸ್ಯರ ಶ್ರೇಯೋಭಿವೃದ್ಧಿಗೆ ಒತ್ತು’

ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2013, 8:22 IST
Last Updated 19 ಸೆಪ್ಟೆಂಬರ್ 2013, 8:22 IST

ಸೋಮವಾರಪೇಟೆ: ಇಲ್ಲಿನ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ  ಸಮಾಜದ ಅಧ್ಯಕ್ಷೆ ಸುಮಾ ಸುದೀಪ್ ಅವರ ಅಧ್ಯಕ್ಷತೆಯಲ್ಲಿ, ಬುಧವಾರ ಸಮಾಜದ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಮಹಿಳಾ ಸಮಾಜದ ಸಭಾಂಗಣ ದುರಸ್ತಿಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಇದರೊಂದಿಗೆ ನೂತನವಾಗಿ ಅಳವಡಿಸಿಕೊಳ್ಳಲು ಉದ್ದೇಶಿಸಿರುವ ಬೈಲಾಕ್ಕೆ ಸರ್ವ ಸದಸ್ಯರ ಅನುಮತಿ ಪಡೆಯಲಾಯಿತು. ಸದಸ್ಯರ ಶ್ರೇಯೋಭಿವೃದ್ಧಿಗೆ ಅನುಕೂಲ­ವಾಗುವಂತಹ ಹೆಚ್ಚಿನ ಕಾರ್ಯಕ್ರಮ­ಗಳನ್ನು ಹಮ್ಮಿಕೊಳ್ಳುವಂತೆ ಸದಸ್ಯರು ಆಡಳಿತ ಮಂಡಳಿಗೆ ತಿಳಿಸಿದರು.

ವೇದಿಕೆಯಲ್ಲಿ ಸಮಾಜದ ಕಾರ್ಯದರ್ಶಿ ನಳಿನಿ ಗಣೇಶ್, ಪದಾಧಿಕಾರಿಗಳಾದ ಜಲಜಾ ಶೇಖರ್, ಗಾಯತ್ರಿ ನಾಗರಾಜು, ಶೋಭಾ ಯಶ್ವಂತ್, ವಿಜಯಲಕ್ಷ್ಮಿ ಸುರೇಶ್, ಜ್ಯೋತಿ ಶುಭಾಕರ್, ಉಷಾ ತೇಜಸ್ವಿ ಇದ್ದರು. ಸಮಾಜದ ವತಿಯಿಂದ ಪಟ್ಟಣ ಪಂಚಾಯಿತಿ ಅಧ್ಯಕ್ಷೆಯಾಗಿ ಆಯ್ಕೆ­ಯಾಗಿರುವ ಲೀಲಾ ನಿರ್ವಾಣಿ­ಅವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.