ADVERTISEMENT

ಸಿದ್ದಾಪುರದಲ್ಲಿ ಸ್ವಯಂಪ್ರೇರಿತ ಬಂದ್

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 6:34 IST
Last Updated 21 ಡಿಸೆಂಬರ್ 2019, 6:34 IST
ಸಿದ್ದಾಪುರ ಪಟ್ಟಣದ ಬಹುತೇಕ ಅಂಗಡಿ ಮುಂಗಟ್ಟುಗಳು ಸ್ವಯಂಘೋಷಿತ ಬಂದ್ ಆಚರಿಸಿದರು.
ಸಿದ್ದಾಪುರ ಪಟ್ಟಣದ ಬಹುತೇಕ ಅಂಗಡಿ ಮುಂಗಟ್ಟುಗಳು ಸ್ವಯಂಘೋಷಿತ ಬಂದ್ ಆಚರಿಸಿದರು.   

ಸಿದ್ದಾಪುರ (ಕೊಡಗು): ಮಂಗಳೂರಿನಲ್ಲಿ ಪ್ರತಿಭಟನಕಾರರ ಮೇಲೆ ಪೊಲೀಸ್ ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ, ಸಿದ್ದಾಪುರ ಹಾಗೂ ನೆಲ್ಯಹುದಿಕೇರಿ ಪಟ್ಟಣದ ವರ್ತಕರು ಶುಕ್ರವಾರ ಸ್ವಯಂಪ್ರೇರಿತ ಬಂದ್ ಆಚರಿಸಿದರು.

ಬೆಳಗ್ಗಿನಿಂದಲೂ ಎರಡು ಪಟ್ಟಣದ ಬಹುತೇಕ ಅಂಗಡಿಗಳು ಸ್ವಯಂ ಪ್ರೇರಿತವಾಗಿ ಮುಚ್ಚಿದ್ದವು. ಕೆಲವು ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದ್ದವು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT