ಜೈಲು ಶಿಕ್ಷೆ(ಪ್ರಾತಿನಿಧಿಕ ಚಿತ್ರ)
ಮಡಿಕೇರಿ: ಮನೆಗೆ ನುಗ್ಗಿ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿದ್ದ ನೇಪಾಳ ಮೂಲದ ನಾಲ್ವರು ಅಪರಾಧಿಗಳಿಗೆ ಇಲ್ಲಿನ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಲಯವು 3 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ದಿಲ್ ಬಹದ್ದೂರು ರಾವುಲ್, ಈಶ್ವರ್ ಥಾಪಾ, ಪ್ರೇಮ್ ಬಹದ್ದೂರ್ ಖಡ್ಕಾ, ಸುದೀಪ್ ಜೇತಾರ ಶಿಕ್ಷೆಗೆ ಗುರಿಯಾದವರು.
ಇವರು 2022ರ ಜನವರಿ 31ರಂದು ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಮೂಟೇರಿ ಎಂಬಲ್ಲಿ ವಿ.ಜಿ.ಜಾನಕಿ, ವಿ.ಜಿ.ಅಮ್ಮಕ್ಕಿ ಅವರ ಮನೆಗೆ ರಾತ್ರಿ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ, ₹ 2.50 ಲಕ್ಷ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ್ದರು.
ಪ್ರಕರಣ ದಾಖಲಿಸಿಕೊಂಡ ಸಿಪಿಐ ಅನೂಪ್ ಮಾದಪ್ಪ ಅವರು ಅಪರಾಧಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಹೊಸಮನಿ ಪುಂಡಲಿಕ ಅವರು ಅಪರಾಧಿಗಳಿಗೆ 3 ವರ್ಷ ಕಠಿಣ ಶಿಕ್ಷೆ ವಿಧಿಸಿದರು.
ಸರ್ಕಾರದ ಪರವಾಗಿ ಕೆ.ಜಿ.ಅಶ್ವಿನಿ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.