ಕುಶಾಲನಗರ: ಪಟ್ಟಣದ ಲಯನ್ಸ್ ಕ್ಲಬ್ ಹಾಗೂ ಗೌಡ ಸಮಾಜದ ವತಿಯಿಂದ ದಿ.ಪುನೀತ್ ರಾಜ್ ಕುಮಾರ್ ಜನ್ಮದಿನದ ಅಂಗವಾಗಿ ಗೌಡ ಸಮಾಜದ ಸಭಾಂಗಣದಲ್ಲಿ ಮಂಗಳವಾರ ರಕ್ತದಾನ ಶಿಬಿರ ನಡೆಯಿತು.
ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್ ಶಿಬಿರ ಉದ್ಘಾಟಿಸಿ ಮಾತನಾಡಿ, ‘ರಕ್ತದಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ. ಅಮೂಲ್ಯವಾದ ರಕ್ತದಾನ ಮತ್ತೊಬ್ಬರ ಜೀವ ಉಳಿಸುವಲ್ಲಿ ಸಹಕಾರಿಯಾಗಿದೆ. ಆದ್ದರಿಂದ ಇಂತಹ ಶಿಬಿರಗಳಲ್ಲಿ ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ’ ಮನವಿ ಮಾಡಿದರು.
ಮೈಸೂರಿನ ಸೆಂಟ್ ಜೋಸೆಫ್ ಬ್ಲಡ್ ಬ್ಯಾಂಕ್ ವೈದ್ಯ ಮಹಮ್ಮದ್ ಮಾತನಾಡಿ, ರಕ್ತದಾನದ ಬಗ್ಗೆ ಅರಿವು ಮೂಡಿಸಿದರು.
ಈ ಸಂದರ್ಭ ಲಯನ್ಸ್ ಕ್ಲಬ್ ಅಧ್ಯಕ್ಷ ಸುಮನ್ ಬಾಲಚಂದ್ರ, ಖಜಾಂಚಿ ನಿತಿನ್ ಗುಪ್ತ, ಕಾರ್ಯದರ್ಶಿ ರಾಜಶೇಖರ್, ಗೌಡ ಸಮಾಜದ ಉಪಾಧ್ಯಕ್ಷರಾದ ದೊರೆ ಗಣಪತಿ, ಕಾಶಿ ಪೂವಯ್ಯ, ಕಾರ್ಯದರ್ಶಿ ಹೇಮಂತ್ ಕುಮಾರ್, ಪ್ರಮುಖರಾದ ಕೂರನ ಪ್ರಕಾಶ್, ಕೊಡಗನ ಹರ್ಷ, ಮಡಿಕೇರಿ ಜಿಲ್ಲಾಸ್ಪತ್ರೆ ರಕ್ತನಿಧಿ ಘಟಕದ ಡಾ.ಕರುಂಬಯ್ಯ ಸೇರಿದಂತೆ ಕ್ಲಬ್ ಮತ್ತು ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.