ADVERTISEMENT

ಬೀಟೆ ನಾಟಾ ಸಾಗಣೆ: ಬಂಧನ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 4:50 IST
Last Updated 19 ಏಪ್ರಿಲ್ 2021, 4:50 IST
ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ವ್ಯಾಪ್ತಿಯಲ್ಲಿ ಬೀಟೆ ಮರ ಕಡಿದು ಸಾಗಿಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದವರು ಭಾನುವಾರ ಬಂಧಿಸಿದರು
ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ವ್ಯಾಪ್ತಿಯಲ್ಲಿ ಬೀಟೆ ಮರ ಕಡಿದು ಸಾಗಿಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದವರು ಭಾನುವಾರ ಬಂಧಿಸಿದರು   

ವಿರಾಜಪೇಟೆ: ಬೀಟೆ ಮರವನ್ನು ಅಕ್ರಮವಾಗಿ ಕಡಿದು ಸಾಗಿಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಕಾರು ಸಹಿತ ತಾಲ್ಲೂಕು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಭಾನುವಾರ ಬಂಧಿಸಿದರು.

ಜಿಲ್ಲೆಯ ಮೂರ್ನಾಡಿನ ನಿವಾಸಿ ಪಿ.ಎನ್. ತನ್ವೀರ್ ಬಂಧಿತ ಆರೋಪಿ.

ತಾಲ್ಲೂಕಿನ ಮಾಲ್ದಾರೆ ಕಳ್ಳಲ್ಲದಲ್ಲಿ ಭಾನುವಾರ ಬೆಳಿಗ್ಗೆ 4.30ರ ಸಮಯದಲ್ಲಿ ಕಾರ್ಯಾಚರಣೆ ನಡೆಸಿ ಅಂದಾಜು ₹2 ಲಕ್ಷ ಮೌಲ್ಯದ ಬೀಟೆ ನಾಟಾಗಳನ್ನು ಸಾಗಿಸಲು ಬಳಸಿದ ಕಾರನ್ನು ಆರೋಪಿ ಸಹಿತ ಬಂಧಿಸಿದ್ದಾರೆ.

ADVERTISEMENT

ಆರೋಪಿಯು ನಾಟಾಗಳನ್ನು ಮೈಸೂರಿಗೆ ಸಾಗಿಸಲು ಯತ್ನಿಸುತ್ತಿದ್ದ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.