ADVERTISEMENT

ಹರಳು ಕಲ್ಲು ಸಾಗಾಟ: ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 4 ಜನವರಿ 2020, 14:05 IST
Last Updated 4 ಜನವರಿ 2020, 14:05 IST

ಮಡಿಕೇರಿ: ಭಾಗಮಂಡಲ ವಲಯದ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಬೆಲೆ ಬಾಳುವ ಹರಳು ಕಲ್ಲು ಸಾಗಾಟ ದಂಧೆಯಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

ಮನೆ, ತೋಟಗಳಲ್ಲಿ ಅಡಗಿಸಿಟ್ಟಿದ್ದ 16.44 ಕೆ.ಜಿ ಹರಳು ಕಲ್ಲು ವಶಕ್ಕೆ ಪಡೆಯಲಾಗಿದೆ. ಮೇಕೇರಿ ಗ್ರಾಮದ ಎಂ.ಕೆ.ಸಲೀಂ, ತ್ಯಾಗರಾಜ ಕಾಲೊನಿ ಎಂ.ಡಿ.ಶರಿಫ್ ಬಂಧಿತರು.

ಮಡಿಕೇರಿ ನಿವಾಸಿ ಅನಿಲಕುಮಾರ್, ತ್ಯಾಗರಾಜ ಕಾಲೊನಿಯ ಮಹಮ್ಮದ್ ಆಲಿ, ಎಂ.ಪಿ.ಸುಲ್ತಾನ್, ಬೆಟ್ಟಗೇರಿಯ ರಾಶಿದ್ ಹಾಗೂ ತಣ್ಣಿಮಾನಿ ಗ್ರಾಮದ ಮಿಟ್ಟು, ಪಾಪು, ಪುಟ್ಟ, ಈ.ಆರ್.ಅಬ್ದುಲ್‌ ಕುಂಞತ್‌ ತಲೆಮರೆಸಿಕೊಂಡಿದ್ದಾರೆ.

ADVERTISEMENT

ಖಚಿತ ಮಾಹಿತಿ ಮೇರೆಗೆ ಮಡಿಕೇರಿಯ ಗಣಪತಿ ಬೀದಿಯ ಎಂ.ಪಿ. ಸುಲ್ತಾನ್‌ ಅವರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದಾಗ ಮನೆಯಲ್ಲಿ 12 ಕೆ.ಜಿ ಹರಳು ಕಲ್ಲು ಪತ್ತೆಯಾಗಿದೆ. ಇದೇ ಸಂದರ್ಭದಲ್ಲಿ ಸಂಪಾಜೆ ಗ್ರಾಮದ ಈ.ಆರ್.ಅಬ್ದುಲ್ ಕುಂಞತ ಅವರ ಮನೆ ಮೇಲೆ ದಾಳಿ ನಡೆಸಿದಾಗ ಮನೆಯಲ್ಲಿ 106 ಕೆ.ಜಿಯಷ್ಟು ಹರಳು ಕಲ್ಲು ಪತ್ತೆಯಾಗಿದೆ. ಅದನ್ನು ಸುಖ್ಯ ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.