ADVERTISEMENT

ಕುಶಾಲನಗರ | ಹುಣ್ಣಿಮೆ ಅಂಗವಾಗಿ ಮಹಾ ಆರತಿ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2024, 4:14 IST
Last Updated 26 ಏಪ್ರಿಲ್ 2024, 4:14 IST
ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಕಾವೇರಿ ನದಿಗೆ ಮಹಾ ಆರತಿ ಮಾಡಲಾಯಿತು
ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಕಾವೇರಿ ನದಿಗೆ ಮಹಾ ಆರತಿ ಮಾಡಲಾಯಿತು   

ಕುಶಾಲನಗರ: ಜೀವನದಿ ಕಾವೇರಿ ಮೂಲ ಸ್ಥಾನದಲ್ಲಿಯೇ ಬತ್ತಿ ಹೋಗುತ್ತಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಆತಂಕ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಕಾವೇರಿ ಆರತಿ ಕ್ಷೇತ್ರದಲ್ಲಿ ಹುಣ್ಣಿಮೆ ಅಂಗವಾಗಿ ನಡೆದ 158ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಬಾರಿ ಕಾವೇರಿಯ ಮೂಲ ಸ್ಥಾನದಲ್ಲಿಯೇ ಕಾವೇರಿ ಸಂಪೂರ್ಣ ಬತ್ತಿ ಹೋಗಿದ್ದು, ಕಳೆದ ಒಂದು ತಿಂಗಳಿನಿಂದ ನದಿಯಲ್ಲಿ ನೀರಿನ ಹರಿವು ಸ್ಥಗಿತಗೊಂಡಿದೆ. ಜಲಚರಗಳು ಸಂಪೂರ್ಣ ನಾಶಗೊಂಡಿವೆ. ಜೊತೆಗೆ ನದಿ ತಟದ ಗ್ರಾಮ ಪಟ್ಟಣಗಳ ಜನತೆಗೆ ಕುಡಿಯುವ ನೀರಿಗೆ ಸಮಸ್ಯೆ ತಲೆದೋರಿದ್ದು, ಜಿಲ್ಲಾಡಳಿತ ಹಾಗೂ ಸರ್ಕಾರ ಈ ಬಗ್ಗೆ ವಾಸ್ತವ ಸ್ಥಿತಿ ಅಧ್ಯಯನ ಮಾಡುವುದರೊಂದಿಗೆ ಕಾವೇರಿಯ ಸಂರಕ್ಷಣೆಗಾಗಿ ಮುಂದಿನ ದಿನಗಳಲ್ಲಿ ಅಗತ್ಯ ಕಾರ್ಯ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದರು.

ಆರತಿ ಕಾರ್ಯಕ್ರಮ ಅಂಗವಾಗಿ ಅರ್ಚಕ ಕೃಷ್ಣಮೂರ್ತಿ ಭಟ್ ಅವರು ಕುಂಕುಮಾರ್ಚನೆ, ಅಷ್ಟೋತ್ತರ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಿದರು. ಕಾರ್ಯಕ್ರಮದಲ್ಲಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಡಿ ಆರ್ ಸೋಮಶೇಖರ್, ಬಳಪಂಡ ಪೊನ್ನು, ಚೈತನ್ಯ ಮತ್ತಿತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.