ADVERTISEMENT

ಬಾಲಕಿಗೆ ಕಿರುಕುಳ; ಆಟೊ ಚಾಲಕ ಬಂಧನ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 16:44 IST
Last Updated 8 ಸೆಪ್ಟೆಂಬರ್ 2022, 16:44 IST

ಕುಶಾಲನಗರ: ಶಾಲಾ ಬಾಲಕಿಯ ಕೈ ಹಿಡಿದು ಎಳೆದಾಡಿದ ಆರೋಪದ ಮೇರೆಗೆ ಆಟೊ ಚಾಲಕ ಹೇಮಂತ್ (22) ಎಂಬಾತನನ್ನು ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಾಲ್ಲೂಕಿನ ಶಾಲೆಯೊಂದರ 7ನೇ ತರಗತಿ ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ತೆರಳುತ್ತಿರುವಾಗ ಮಾರ್ಗ ಮಧ್ಯೆ ಹೇಮಂತ್ ಎಂಬಾತ ಕೈಹಿಡಿದು ಎಳೆದಾಡಿ ಪೀಡಿಸಿದ್ದಾನೆ. ಈಸಂಬಂಧ ಬಾಲಕಿ‌ ಪೋಷಕರು ನೀಡಿದ ದೂರಿನ ಮೇರೆಗೆ ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್ಐ ಚಂದ್ರಶೇಖರ್ ಆರೋಪಿಯನ್ನು ಬಂಧಿಸಿ ಆತನ ವಿರುದ್ದ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಶಾಲಾ, ಕಾಲೇಜುಗಳ ಬಳಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವ ಹಾಗೂ ರ‍್ಯಾಗಿಂಗ್ ಮಾಡುವ ಪುಂಡರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಪಿಎಸ್ಐ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.