ನಾಪೋಕ್ಲು: ಸಾಹಿತಿ ಉಳ್ಳಿಯಡ ಡಾಟಿ ಪೂವಯ್ಯ ಅವರ ನೇತೃತ್ವದಲ್ಲಿ ಸೋಮವಾರ ಇಲ್ಲಿನ ಪಾಡಿ ಇಗ್ಗುತ್ತಪ್ಪ ದೇವಾಲಯಕ್ಕೆ 10ರಿಂದ 15 ಮಂದಿ ಮಹಿಳೆಯರು ಪಾದರಕ್ಷೆ ಧರಿಸದೇ ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಿ ಮಳೆಗಾಗಿ ಪ್ರಾರ್ಥಿಸಿದರು.
ಕೊಡಗಿನ 4 ದಿಕ್ಕುಗಳಿಂದ ಆಗಮಿಸಿದ ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಕಕ್ಕಬೆಯ ಪಟ್ಟಣದ ಸ್ವಾಗತ ಕಮಾನುವಿನಿಂದ ಪಾಡಿ ಇಗ್ಗುತ್ತಪ್ಪ ದೇವಾಲಯದವರೆಗೆ ಪೂಜಾ ಪರಿಕರಗಳನ್ನು ಹೊತ್ತು ನಡೆದರು. ಬಳಿಕ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.